11:35 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 6ನೇ ಸ್ಪಾಟ್ ನಲ್ಲಿ ಅಸ್ತಿಪಂಜರದ ಅವಶೇಷ ಪತ್ತೆ?

31/07/2025, 14:16

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಮೂರನೇ ದಿನವಾದ ಇಂದು(ಗುರುವಾರ) ಕೂಡ ಸಮಾಧಿ ಉತ್ಖನನ ಮುಂದುವರಿದಿದ್ದು, 6ನೇ ಸ್ಪಾಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ ಎಂದು ಎಸ್‌ಐಟಿ ಮೂಲಗಳು ದೃಢಪಡಿಸಿವೆ.
ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ಗುರುತಿಸಲಾದ 6ನೇ ಸ್ಪಾಟ್ ನಲ್ಲಿ ಸಮಾಧಿ ಅಗೆತ ನಡೆಸಲಾಗಿದ್ದು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧಿಸಿ ಮೂರು ದಿನಗಳಿಂದ ಸಾಕ್ಷ್ಯ ಪತ್ತೆಗಾಗಿ ಎಸ್‌ಐಟಿ ತಂಡ ಕಾರ್ಮಿಕರ ಮೂಲಕ ಅಗೆಯುವ ಕೆಲಸದಲ್ಲಿ ತೊಡಗಿದೆ. ಮೂರು ದಿನಗಳಲ್ಲಿ ಗುರುತು ಹಾಕಿದ ಐದು ಕಡೆ ಅಗೆತ ನಡೆಸಿದಾಗ, ಯಾವುದೇ ಸಾಕ್ಷ್ಯ ಲಭಿಸಿರಲಿಲ್ಲ.
ಇಂದು ಬೆಳಗ್ಗಿನಿಂದ ಆರನೇ ಸಮಾಧಿ ಜಾಗದಲ್ಲಿ ಅಗೆಯಲಾಗಿದ್ದು ಅಸ್ಥಿಪಂಜರದ ಅವಶೇಷಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ ಅತ್ಯಂತ ಜೋಪಾನವಾಗಿ ಅಗೆಯುವ ಕೆಲಸ ನಡೆಯುವ ಸಾಧ್ಯತೆ ಇದೆ. ಸ್ಥಳದಲ್ಲಿ ಡಿಐಜಿ ಅನುಚೇತ್, ಎಸ್ಪಿ ಜಿತೇಂದ್ರ ದಯಾಮ, ಪುತ್ತೂರು ಎಸಿ ಸ್ಟೆಲ್ಲಾ ಮೇರಿಸ್ ಇದ್ದಾರೆ. ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಅಗೆಯುವ ಕೆಲಸ ಮಾಡಲಾಗುತ್ತಿದ್ದು ಹೆಣ ಹೂತ ಪ್ರಕರಣ ಸಾರ್ವಜನಿಕರ ಗಮನ ಸೆಳೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು