1:40 PM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸರಣಿ ಹತ್ಯೆ?: ಶವಗಳ ಹೂತು ಹಾಕಿದ್ದೇನೆ ಎಂದು ದೂರು ನೀಡಿದಾತ ಬೆಳ್ತಂಗಡಿ ಕೋರ್ಟ್ ಗೆ ಹಾಜರು

11/07/2025, 19:37

ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಹಾಗೂ ಬೇರೆ ಬೇರೆ ಕಾರಣಗಳಿಗೆ ಕೊಲೆಯಾದವರನ್ನು ಹೂತು ಹಾಕಿದ್ದೇನೆ ಎಂದು ತಪ್ಪೊಪ್ಪಿಕೊಂಡಿರುವ ದೂರುದಾರನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಹಾಜರುಪಡಿಸಲಾಯಿತು.


ಧರ್ಮಸ್ಥಳದಲ್ಲಿ ನಡೆದ ಸರಣಿ ಕೊಲೆಗಳ ಬಗ್ಗೆ ತನ್ನಲ್ಲಿ ಮಾಹಿತಿ ಇದೆ. ಆ ಶವಗಳನ್ನು ನಾನೇ ಹೂತು ಹಾಕಿದ್ದೇನೆ. ಯಾರು ಈ ಕೊಲೆಗಳನ್ನು ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬರು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಈಗಾಗಲೇ ಎಫ್ ಐಆರ್ ದಾಖಲಾಗಿತ್ತು.
ಹತ್ಯೆಗೊಳಗಾದವರನ್ನು ಹೂತು ಹಾಕಿದ್ದೇನೆ ಎಂದು ದೂರಿನಲ್ಲಿ ತಪ್ಪೊಪ್ಪಿಕೊಂಡಿರುವ ವ್ಯಕ್ತಿಯನ್ನು ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ದೂರುದಾರನ ಗುರುತು ಸಿಗದಂತೆ ಕಪ್ಪು ಡ್ರೆಸ್ ಹಾಗೂ ಮುಖಕ್ಕೆ ಕಪ್ಪು ಕವರ್ ಹಾಕಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು