9:37 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸರಣಿ ಹತ್ಯೆ?: ಶವಗಳ ಹೂತು ಹಾಕಿದ್ದೇನೆ ಎಂದು ದೂರು ನೀಡಿದಾತ ಬೆಳ್ತಂಗಡಿ ಕೋರ್ಟ್ ಗೆ ಹಾಜರು

11/07/2025, 19:37

ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಹಾಗೂ ಬೇರೆ ಬೇರೆ ಕಾರಣಗಳಿಗೆ ಕೊಲೆಯಾದವರನ್ನು ಹೂತು ಹಾಕಿದ್ದೇನೆ ಎಂದು ತಪ್ಪೊಪ್ಪಿಕೊಂಡಿರುವ ದೂರುದಾರನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಹಾಜರುಪಡಿಸಲಾಯಿತು.


ಧರ್ಮಸ್ಥಳದಲ್ಲಿ ನಡೆದ ಸರಣಿ ಕೊಲೆಗಳ ಬಗ್ಗೆ ತನ್ನಲ್ಲಿ ಮಾಹಿತಿ ಇದೆ. ಆ ಶವಗಳನ್ನು ನಾನೇ ಹೂತು ಹಾಕಿದ್ದೇನೆ. ಯಾರು ಈ ಕೊಲೆಗಳನ್ನು ನಡೆಸಿದ್ದರು ಎನ್ನುವುದರ ಬಗ್ಗೆ ಮಾಹಿತಿ ನೀಡುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬರು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಈಗಾಗಲೇ ಎಫ್ ಐಆರ್ ದಾಖಲಾಗಿತ್ತು.
ಹತ್ಯೆಗೊಳಗಾದವರನ್ನು ಹೂತು ಹಾಕಿದ್ದೇನೆ ಎಂದು ದೂರಿನಲ್ಲಿ ತಪ್ಪೊಪ್ಪಿಕೊಂಡಿರುವ ವ್ಯಕ್ತಿಯನ್ನು ಇಂದು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ದೂರುದಾರನ ಗುರುತು ಸಿಗದಂತೆ ಕಪ್ಪು ಡ್ರೆಸ್ ಹಾಗೂ ಮುಖಕ್ಕೆ ಕಪ್ಪು ಕವರ್ ಹಾಕಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು