11:08 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಧರ್ಮಸ್ಥಳ- ಸೋಮವಾರಪೇಟೆ- ಕುಕ್ಕೆ ಸುಬ್ರಹ್ಮಣ್ಯ: ಇಂದಿನಿಂದ ಹೊಸ ಬಸ್ ಸೇವೆ

28/05/2026, 10:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆಸುಬ್ರಹ್ಮಣ್ಯಕ್ಕೆ ಬರುವ ಯಾತ್ರಾರ್ಥಿಗಳ ಹಾಗೂ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಬಿಸ್ಲೆ, ಕೂಡು ರಸ್ತೆ, ಶನಿವಾರಸಂತೆ, ಸೋಮವಾರಪೇಟೆ, ಕುಶಾಲನಗರ, ಮೈಸೂರು, ಬೆಂಗಳೂರು ಮಾರ್ಗದಲ್ಲಿ ಹೊಸ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಮೇ, 28 ರಿಂದ ಆರಂಭವಾಗಲಿದೆ. ನಿರ್ಗಮನ ಸಮಯ ಇಂತಿದೆ: ಧರ್ಮಸ್ಥಳದಿಂದ ಬೆಳಗ್ಗೆ 6.30 ಗಂಟೆಗೆ ನಿರ್ಗಮನ, ಕುಕ್ಕೆ ಸುಬ್ರಹ್ಮಣ್ಯದಿಂದ ಬೆಳಗ್ಗೆ 8 ಗಂಟೆಗೆ ನಿರ್ಗಮನ, ಬಿಸ್ಲೆ ಬೆಳಗ್ಗೆ 8.50 ಗಂಟೆಗೆ ನಿರ್ಗಮನ, ಶನಿವಾರಸಂತೆಯಿಂದ ಬೆಳಗ್ಗೆ 9.35 ಗಂಟೆಗೆ ನಿರ್ಗಮನ ಹಾಗೂ ಸೋಮವಾರಪೇಟೆಯಿಂದ ಬೆಳಗ್ಗೆ 10.30 ಗಂಟೆಗೆ ನಿರ್ಗಮನವಾಗಲಿದೆ.

ಅದೇ ಬಸ್ಸು ಬೆಂಗಳೂರು ಕೆಂಪೇಗೌಡ ಬಸ್ಸು ನಿಲ್ದಾಣದಿಂದ 9.45 ಗಂಟೆಗೆ ನಿರ್ಗಮನಗೊಂಡು ಮೈಸೂರು, ಕುಶಾಲನಗರ, ಸೋಮವಾರಪೇಟೆ, ಶನಿವಾರಸಂತೆ, ಕೂಡುರಸ್ತೆ, ಬಿಸ್ಲೆ, ಕುಕ್ಕೆಸುಬ್ರಹ್ಮಣ್ಯ ಮಾರ್ಗವಾಗಿ ಧರ್ಮಸ್ಥಳಕ್ಕೆ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಹತ್ತಿರದ ಬಸ್ಸು ನಿಲ್ದಾಣ ಅಥವಾ ಟಿಕೇಟು ಕೌಂಟರ್‍ನಿಂದ ಅಥವಾ ಆನ್‍ಲೈನ್ ಬುಕ್ಕಿಂಗ್ ಮಾಡಿಕೊಳ್ಳಬಹುದು. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪುತ್ತೂರು ವಿಭಾಗದ ಕ.ರಾ.ರ.ಸಾನಿ. ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀಹರಿಬಾಬು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು