3:21 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಪತಿಯ ಹಾದಿ ಹಿಡಿದ ಪತ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಧ್ರುವನಾರಾಯಣ್ ಪತ್ನಿ ವೀಣಾ ಇನ್ನಿಲ್ಲ

07/04/2023, 13:40

ಮೈಸೂರು(reporterkarnataka.com):
ಹೃದಯಾಘಾತದಿಂದ ಇತ್ತೀಚಿಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಅವರ ಪತ್ನಿ ವೀಣಾ(50) ಅನಾರೋಗ್ಯದಿಂದ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಬ್ರೈನ್ ಟ್ಯೂಮರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು.
ವೀಣಾ ಅವರು ದಿ.ಧ್ರುವನಾರಾಯಣ್ ಅವರ ಅಕ್ಕನ ಮಗಳು. ಧ್ರುವ ನಾರಾಯಣ್ ಮೃತಪಟ್ಟ ಸ್ವಲ್ಪ ದಿನಗಳಲ್ಲೇ ಪತ್ನಿ ನಿಧನರಾಗಿರುವುದು ಪುತ್ರ ದರ್ಶನ್ ಧ್ರುವ ನಾರಾಯಣ್ ಅವರಿಗೆ ಮತ್ತೊಂದು ಆಘಾತ ಉಂಟು ಮಾಡಿದೆ.

ದರ್ಶನ್ ಅವರು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಂದೆಯನ್ನು ಕಳೆದುಕೊಂಡಿರುವ ದುಃಖದಲ್ಲಿದ್ದ ಅವರು ಅದರಿಂದ ಚೇತರಿಸಿಕೊಳ್ಳುವ ಮುನ್ನವೇ
ತಾಯಿಯನ್ನು ಕಳೆದುಕೊಂಡಿದ್ದಾರೆ.
ದರ್ಶನ್ ತಮ್ಮ ಧೀರನ್ ತಾಯಿಯ ಆರೈಕೆ ನೋಡಿಕೊಳ್ಳುತ್ತಿದ್ದರು. ಮೃತ ವೀಣಾ ಅವರ ಅಂತ್ಯಕ್ರಿಯೆ ಹೆಗ್ಗವಾಡಿ ಗ್ರಾಮದಲ್ಲಿ ಶನಿವಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು