6:44 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪತಿಯ ಹಾದಿ ಹಿಡಿದ ಪತ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಧ್ರುವನಾರಾಯಣ್ ಪತ್ನಿ ವೀಣಾ ಇನ್ನಿಲ್ಲ

07/04/2023, 13:40

ಮೈಸೂರು(reporterkarnataka.com):
ಹೃದಯಾಘಾತದಿಂದ ಇತ್ತೀಚಿಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಅವರ ಪತ್ನಿ ವೀಣಾ(50) ಅನಾರೋಗ್ಯದಿಂದ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಬ್ರೈನ್ ಟ್ಯೂಮರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು.
ವೀಣಾ ಅವರು ದಿ.ಧ್ರುವನಾರಾಯಣ್ ಅವರ ಅಕ್ಕನ ಮಗಳು. ಧ್ರುವ ನಾರಾಯಣ್ ಮೃತಪಟ್ಟ ಸ್ವಲ್ಪ ದಿನಗಳಲ್ಲೇ ಪತ್ನಿ ನಿಧನರಾಗಿರುವುದು ಪುತ್ರ ದರ್ಶನ್ ಧ್ರುವ ನಾರಾಯಣ್ ಅವರಿಗೆ ಮತ್ತೊಂದು ಆಘಾತ ಉಂಟು ಮಾಡಿದೆ.

ದರ್ಶನ್ ಅವರು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಂದೆಯನ್ನು ಕಳೆದುಕೊಂಡಿರುವ ದುಃಖದಲ್ಲಿದ್ದ ಅವರು ಅದರಿಂದ ಚೇತರಿಸಿಕೊಳ್ಳುವ ಮುನ್ನವೇ
ತಾಯಿಯನ್ನು ಕಳೆದುಕೊಂಡಿದ್ದಾರೆ.
ದರ್ಶನ್ ತಮ್ಮ ಧೀರನ್ ತಾಯಿಯ ಆರೈಕೆ ನೋಡಿಕೊಳ್ಳುತ್ತಿದ್ದರು. ಮೃತ ವೀಣಾ ಅವರ ಅಂತ್ಯಕ್ರಿಯೆ ಹೆಗ್ಗವಾಡಿ ಗ್ರಾಮದಲ್ಲಿ ಶನಿವಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು