7:47 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಮಾರ್ಚ್ 27ರಿಂದ: 50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

26/03/2026, 19:47

ಪುತ್ತೂರು(reporterkarnataka.com): ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್‌ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ.
‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಫೆಸ್ಟ್‌ನ ಅಂಗವಾಗಿ ಗ್ರಾಹಕರು ₹50,000 ಹೆಚ್ಚಿನ ಖರೀದಿಗೆ ಖಚಿತ ಉಡುಗೊರೆಯನ್ನು ಪಡೆಯಬಹುದಾಗಿದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಅವಕಾಶವೂ ಇದೆ. ಈ ಉತ್ಸವದ ಸಂದರ್ಭದಲ್ಲಿ ಹೆಚ್ಚಿನ ವೆರೈಟಿಯ ವಜ್ರಾಭರಣಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿದೆ.
ವಜ್ರದ ಆಭರಣಗಳ ಮೇಲೆ 95% ಎಕ್ಸ್‌ಚೇಂಜ್ ಮತ್ತು 90% ಬೈಬ್ಯಾಕ್ ಸೌಲಭ್ಯವನ್ನು ಸಂಸ್ಥೆ ನೀಡುತ್ತಿದ್ದು, ಹಳೆಯ ಆಭರಣಗಳನ್ನು ಹೊಸದಾಗಿ ಪರಿವರ್ತಿಸಿಕೊಳ್ಳಲು ಇದು ಒಳ್ಳೆಯ ಅವಕಾಶ ಎಂದು ಸಂಸ್ಥೆ ತಿಳಿಸಿದೆ.
ಮದುವೆ ಹಾಗೂ ಹಬ್ಬಗಳ ಸೀಸನ್‌ಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿನ್ಯಾಸಗಳ ಹಾರಗಳು, ಕಿವಿಯೋಲೆಗಳು, ಉಂಗುರಗಳು ಸೇರಿದಂತೆ ಹಲವಾರು ನವನವೀನ ಆಭರಣಗಳು ಈ ಉತ್ಸವದಲ್ಲಿ ಜನಾಕರ್ಷಣೆಯಾಗಿದೆ.

ಅಮೂಲ್ಯ ಡೈಮಂಡ್ಸ್‌ ಮತ್ತು ಕಿಸ್ನ ಡೈಮಂಡ್ & ಗೋಲ್ಡ್ ಜ್ಯುವೆಲ್ಲರಿ ಬ್ರ್ಯಾಂಡ್‌ಗಳು ಜೊತೆಯಾಗಿ ನಡೆಸುತ್ತಿರುವ ಈ ಉತ್ಸವ ಗುಣಮಟ್ಟ ಮತ್ತು ವೈವಿಧ್ಯತೆಯಲ್ಲಿಯೂ ಗಮನ ಸೆಳೆಯುತ್ತಿದೆ.
ಗ್ರಾಹಕರು ಸಮೀಪದ ಮುಳಿಯ ಶೋರೂಮ್‌ಗಳಿಗೆ ಭೇಟಿ ನೀಡಿ ಈ ವಿಶೇಷ ಆಫರ್‌ಗಳನ್ನು ತಮ್ಮದಾಗಿಸಿಕೊಳ್ಳಬಹುದು.ಪುತ್ತೂರು, ಬೆಳ್ತಂಗಡಿ, ಮಡಿಕೇರಿ ಹಾಗೂ ಗೋಣಿಕೊಪ್ಪ ಈ ನಾಲ್ಕು ಶಾಖೆಗಳಲ್ಲಿ ಡೈಮಂಡ್ ಫೆಸ್ಟ್ ನಡೆಯುತ್ತಿದೆ.
ಉತ್ಸವದ ಕುರಿತು ಪ್ರತಿಕ್ರಿಯಿಸಿದ ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಮಾತನಾಡಿ, “ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ ಆಭರಣಗಳನ್ನು ಸ್ಪರ್ಧಾತ್ಮಕ ಬೆಲೆಯಲ್ಲೇ ಒದಗಿಸುವುದು ನಮ್ಮ ಉದ್ದೇಶ. ಈ ಡೈಮಂಡ್ ಫೆಸ್ಟ್ ಮೂಲಕ ಹೆಚ್ಚಿನ ಜನರಿಗೆ ವಿಶೇಷ ಅನುಭವ ನೀಡಲು ನಾವು ಸಜ್ಜಾಗಿದ್ದೇವೆ,” ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು