1:01 AM Monday16 - September 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ… ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ…

ಇತ್ತೀಚಿನ ಸುದ್ದಿ

ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

04/09/2024, 17:14

ಮಂಗಳೂರು(reporterkarnataka.com): ಯಾವುದೇ ಮಾಹಿತಿ ನೀಡದೆ ನಗರದಲ್ಲಿ ದಿಢೀರ್ ವಾಹನ ಸಂಚಾರ ಬದಲಾವಣೆ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತ ವ್ಯವಸ್ಥೆಯ ಏಕಪಕ್ಷೀಯ ನಿರ್ಧಾರದಿಂದ ಆಟೋ ಚಾಲಕರು ಕೂಡ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.


ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸುಗಳು ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಎಲ್ಲೂ ನಿಲ್ಲಿಸದೆ ಬಲಬದಿಯಲ್ಲೇ ಹೋಗಬೇಕು ಎಂದು ಸೂಚನೆ ನೀಡಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಲೇಡಿಗೋಗಶನ್ ಬಳಿಯ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಬಸ್ ಹತ್ತದಂತಾಗಿದೆ ಎಂದು ಅವರು ನುಡಿದರು.
ಸಂಚಾರ ಬದಲಾವಣೆ ಮಾಡುವಾಗ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಕೇಳುವ ಸೌಜನ್ಯ ಕೂಡ ತೋರಿಸಲಿಲ್ಲ. ಹಲವು ಕಡೆ ಯೂ ಟರ್ನ್ ಗಳನ್ನು ಬಂದ್ ಮಾಡಲಾಗಿದೆ. ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಹಂಪನಕಟ್ಟೆಯ ವಿವಿ ಕಾಲೇಜು ಮುಂಭಾಗದಲ್ಲಿರುವ ಬಸ್ ನಿಲ್ದಾಣವನ್ನು ಕೇವಲ ಒಬ್ಬ ವ್ಯಕ್ತಿಯ ಅಂಗಡಿ ವ್ಯಾಪಾರದ ಉದ್ದೇಶಕ್ಕಾಗಿ ಯಾವುದೇ ಮಾಹಿತಿ ನೀಡದೆ ರಾತೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವವರು ಬಿಸಿಲು ಮಳೆಗೆ ನಿಲ್ಲುವಂತಾಗಿದೆ. ಇಲ್ಲಿ ಕೂಡ ಕಾಂಗ್ರೆಸ್ ನಾಯಕರ ಒತ್ತಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೌಖಿಕ ಆದೇಶದ ಮಾತು ಕೇಳಿ ಬರುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ವಿಘ್ನ ವಿನಾಯಕನಿಗೆ ವಿಘ್ನ ತರುವಂತೆ ಮಾಡು ಕಾರ್ಯದಲ್ಲಿ ತೊಡಗಿದೆ. ಸರಕಾರ ಸಾರ್ವಜನಿಕ ಗಣೇಶೋತ್ಸವ ಆಯೋಜಕರಿಗೆ ಹೊಸ ನಿಯಮದ ಮೂಲಕ ವಿಘ್ನ ತರುವ ಕಾರ್ಯ ಮಾಡಿದೆ.ಕಾರ್ಯಕ್ರಮಕ್ಕೆ ಬರುವ ಅತಿಥಿ ಗಳ ಮೊಬೈಲ್ ಸಂಖ್ಯೆ, ಹೆಸರುಗಳು ನೀಡುವಂತೆ ಒತ್ತಡ ಹೇರಿದೆ.
ಇನ್ನೂ ಶೋಭಾಯಾತ್ರೆ ಭಾಗವಹಿಸುವ ವಾಹನ ಗಳ ದಾಖಲೆ ಪತ್ರ ಇನ್ನಿತರ ದಾಖಲೆ ನೀಡಬೇಕಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಹಿಂದೂ ಧಾರ್ಮಿಕತೆ ದಕ್ಕೆ ತಂದು ನಮ್ಮ ನಂಬಿಕೆಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು