9:00 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

04/09/2024, 17:14

ಮಂಗಳೂರು(reporterkarnataka.com): ಯಾವುದೇ ಮಾಹಿತಿ ನೀಡದೆ ನಗರದಲ್ಲಿ ದಿಢೀರ್ ವಾಹನ ಸಂಚಾರ ಬದಲಾವಣೆ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತ ವ್ಯವಸ್ಥೆಯ ಏಕಪಕ್ಷೀಯ ನಿರ್ಧಾರದಿಂದ ಆಟೋ ಚಾಲಕರು ಕೂಡ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.


ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸುಗಳು ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಎಲ್ಲೂ ನಿಲ್ಲಿಸದೆ ಬಲಬದಿಯಲ್ಲೇ ಹೋಗಬೇಕು ಎಂದು ಸೂಚನೆ ನೀಡಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಲೇಡಿಗೋಗಶನ್ ಬಳಿಯ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಬಸ್ ಹತ್ತದಂತಾಗಿದೆ ಎಂದು ಅವರು ನುಡಿದರು.
ಸಂಚಾರ ಬದಲಾವಣೆ ಮಾಡುವಾಗ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಕೇಳುವ ಸೌಜನ್ಯ ಕೂಡ ತೋರಿಸಲಿಲ್ಲ. ಹಲವು ಕಡೆ ಯೂ ಟರ್ನ್ ಗಳನ್ನು ಬಂದ್ ಮಾಡಲಾಗಿದೆ. ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಹಂಪನಕಟ್ಟೆಯ ವಿವಿ ಕಾಲೇಜು ಮುಂಭಾಗದಲ್ಲಿರುವ ಬಸ್ ನಿಲ್ದಾಣವನ್ನು ಕೇವಲ ಒಬ್ಬ ವ್ಯಕ್ತಿಯ ಅಂಗಡಿ ವ್ಯಾಪಾರದ ಉದ್ದೇಶಕ್ಕಾಗಿ ಯಾವುದೇ ಮಾಹಿತಿ ನೀಡದೆ ರಾತೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವವರು ಬಿಸಿಲು ಮಳೆಗೆ ನಿಲ್ಲುವಂತಾಗಿದೆ. ಇಲ್ಲಿ ಕೂಡ ಕಾಂಗ್ರೆಸ್ ನಾಯಕರ ಒತ್ತಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೌಖಿಕ ಆದೇಶದ ಮಾತು ಕೇಳಿ ಬರುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ವಿಘ್ನ ವಿನಾಯಕನಿಗೆ ವಿಘ್ನ ತರುವಂತೆ ಮಾಡು ಕಾರ್ಯದಲ್ಲಿ ತೊಡಗಿದೆ. ಸರಕಾರ ಸಾರ್ವಜನಿಕ ಗಣೇಶೋತ್ಸವ ಆಯೋಜಕರಿಗೆ ಹೊಸ ನಿಯಮದ ಮೂಲಕ ವಿಘ್ನ ತರುವ ಕಾರ್ಯ ಮಾಡಿದೆ.ಕಾರ್ಯಕ್ರಮಕ್ಕೆ ಬರುವ ಅತಿಥಿ ಗಳ ಮೊಬೈಲ್ ಸಂಖ್ಯೆ, ಹೆಸರುಗಳು ನೀಡುವಂತೆ ಒತ್ತಡ ಹೇರಿದೆ.
ಇನ್ನೂ ಶೋಭಾಯಾತ್ರೆ ಭಾಗವಹಿಸುವ ವಾಹನ ಗಳ ದಾಖಲೆ ಪತ್ರ ಇನ್ನಿತರ ದಾಖಲೆ ನೀಡಬೇಕಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಹಿಂದೂ ಧಾರ್ಮಿಕತೆ ದಕ್ಕೆ ತಂದು ನಮ್ಮ ನಂಬಿಕೆಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು