3:53 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

04/09/2024, 17:14

ಮಂಗಳೂರು(reporterkarnataka.com): ಯಾವುದೇ ಮಾಹಿತಿ ನೀಡದೆ ನಗರದಲ್ಲಿ ದಿಢೀರ್ ವಾಹನ ಸಂಚಾರ ಬದಲಾವಣೆ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತ ವ್ಯವಸ್ಥೆಯ ಏಕಪಕ್ಷೀಯ ನಿರ್ಧಾರದಿಂದ ಆಟೋ ಚಾಲಕರು ಕೂಡ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.


ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸುಗಳು ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಎಲ್ಲೂ ನಿಲ್ಲಿಸದೆ ಬಲಬದಿಯಲ್ಲೇ ಹೋಗಬೇಕು ಎಂದು ಸೂಚನೆ ನೀಡಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಲೇಡಿಗೋಗಶನ್ ಬಳಿಯ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಬಸ್ ಹತ್ತದಂತಾಗಿದೆ ಎಂದು ಅವರು ನುಡಿದರು.
ಸಂಚಾರ ಬದಲಾವಣೆ ಮಾಡುವಾಗ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಕೇಳುವ ಸೌಜನ್ಯ ಕೂಡ ತೋರಿಸಲಿಲ್ಲ. ಹಲವು ಕಡೆ ಯೂ ಟರ್ನ್ ಗಳನ್ನು ಬಂದ್ ಮಾಡಲಾಗಿದೆ. ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಹಂಪನಕಟ್ಟೆಯ ವಿವಿ ಕಾಲೇಜು ಮುಂಭಾಗದಲ್ಲಿರುವ ಬಸ್ ನಿಲ್ದಾಣವನ್ನು ಕೇವಲ ಒಬ್ಬ ವ್ಯಕ್ತಿಯ ಅಂಗಡಿ ವ್ಯಾಪಾರದ ಉದ್ದೇಶಕ್ಕಾಗಿ ಯಾವುದೇ ಮಾಹಿತಿ ನೀಡದೆ ರಾತೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವವರು ಬಿಸಿಲು ಮಳೆಗೆ ನಿಲ್ಲುವಂತಾಗಿದೆ. ಇಲ್ಲಿ ಕೂಡ ಕಾಂಗ್ರೆಸ್ ನಾಯಕರ ಒತ್ತಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೌಖಿಕ ಆದೇಶದ ಮಾತು ಕೇಳಿ ಬರುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ವಿಘ್ನ ವಿನಾಯಕನಿಗೆ ವಿಘ್ನ ತರುವಂತೆ ಮಾಡು ಕಾರ್ಯದಲ್ಲಿ ತೊಡಗಿದೆ. ಸರಕಾರ ಸಾರ್ವಜನಿಕ ಗಣೇಶೋತ್ಸವ ಆಯೋಜಕರಿಗೆ ಹೊಸ ನಿಯಮದ ಮೂಲಕ ವಿಘ್ನ ತರುವ ಕಾರ್ಯ ಮಾಡಿದೆ.ಕಾರ್ಯಕ್ರಮಕ್ಕೆ ಬರುವ ಅತಿಥಿ ಗಳ ಮೊಬೈಲ್ ಸಂಖ್ಯೆ, ಹೆಸರುಗಳು ನೀಡುವಂತೆ ಒತ್ತಡ ಹೇರಿದೆ.
ಇನ್ನೂ ಶೋಭಾಯಾತ್ರೆ ಭಾಗವಹಿಸುವ ವಾಹನ ಗಳ ದಾಖಲೆ ಪತ್ರ ಇನ್ನಿತರ ದಾಖಲೆ ನೀಡಬೇಕಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಹಿಂದೂ ಧಾರ್ಮಿಕತೆ ದಕ್ಕೆ ತಂದು ನಮ್ಮ ನಂಬಿಕೆಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು