9:38 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

04/09/2024, 17:14

ಮಂಗಳೂರು(reporterkarnataka.com): ಯಾವುದೇ ಮಾಹಿತಿ ನೀಡದೆ ನಗರದಲ್ಲಿ ದಿಢೀರ್ ವಾಹನ ಸಂಚಾರ ಬದಲಾವಣೆ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತ ವ್ಯವಸ್ಥೆಯ ಏಕಪಕ್ಷೀಯ ನಿರ್ಧಾರದಿಂದ ಆಟೋ ಚಾಲಕರು ಕೂಡ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.


ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸುಗಳು ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಎಲ್ಲೂ ನಿಲ್ಲಿಸದೆ ಬಲಬದಿಯಲ್ಲೇ ಹೋಗಬೇಕು ಎಂದು ಸೂಚನೆ ನೀಡಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಲೇಡಿಗೋಗಶನ್ ಬಳಿಯ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಬಸ್ ಹತ್ತದಂತಾಗಿದೆ ಎಂದು ಅವರು ನುಡಿದರು.
ಸಂಚಾರ ಬದಲಾವಣೆ ಮಾಡುವಾಗ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಕೇಳುವ ಸೌಜನ್ಯ ಕೂಡ ತೋರಿಸಲಿಲ್ಲ. ಹಲವು ಕಡೆ ಯೂ ಟರ್ನ್ ಗಳನ್ನು ಬಂದ್ ಮಾಡಲಾಗಿದೆ. ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಹಂಪನಕಟ್ಟೆಯ ವಿವಿ ಕಾಲೇಜು ಮುಂಭಾಗದಲ್ಲಿರುವ ಬಸ್ ನಿಲ್ದಾಣವನ್ನು ಕೇವಲ ಒಬ್ಬ ವ್ಯಕ್ತಿಯ ಅಂಗಡಿ ವ್ಯಾಪಾರದ ಉದ್ದೇಶಕ್ಕಾಗಿ ಯಾವುದೇ ಮಾಹಿತಿ ನೀಡದೆ ರಾತೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವವರು ಬಿಸಿಲು ಮಳೆಗೆ ನಿಲ್ಲುವಂತಾಗಿದೆ. ಇಲ್ಲಿ ಕೂಡ ಕಾಂಗ್ರೆಸ್ ನಾಯಕರ ಒತ್ತಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೌಖಿಕ ಆದೇಶದ ಮಾತು ಕೇಳಿ ಬರುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ವಿಘ್ನ ವಿನಾಯಕನಿಗೆ ವಿಘ್ನ ತರುವಂತೆ ಮಾಡು ಕಾರ್ಯದಲ್ಲಿ ತೊಡಗಿದೆ. ಸರಕಾರ ಸಾರ್ವಜನಿಕ ಗಣೇಶೋತ್ಸವ ಆಯೋಜಕರಿಗೆ ಹೊಸ ನಿಯಮದ ಮೂಲಕ ವಿಘ್ನ ತರುವ ಕಾರ್ಯ ಮಾಡಿದೆ.ಕಾರ್ಯಕ್ರಮಕ್ಕೆ ಬರುವ ಅತಿಥಿ ಗಳ ಮೊಬೈಲ್ ಸಂಖ್ಯೆ, ಹೆಸರುಗಳು ನೀಡುವಂತೆ ಒತ್ತಡ ಹೇರಿದೆ.
ಇನ್ನೂ ಶೋಭಾಯಾತ್ರೆ ಭಾಗವಹಿಸುವ ವಾಹನ ಗಳ ದಾಖಲೆ ಪತ್ರ ಇನ್ನಿತರ ದಾಖಲೆ ನೀಡಬೇಕಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಹಿಂದೂ ಧಾರ್ಮಿಕತೆ ದಕ್ಕೆ ತಂದು ನಮ್ಮ ನಂಬಿಕೆಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು