1:50 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

04/09/2024, 17:14

ಮಂಗಳೂರು(reporterkarnataka.com): ಯಾವುದೇ ಮಾಹಿತಿ ನೀಡದೆ ನಗರದಲ್ಲಿ ದಿಢೀರ್ ವಾಹನ ಸಂಚಾರ ಬದಲಾವಣೆ ಮಾಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಆಡಳಿತ ವ್ಯವಸ್ಥೆಯ ಏಕಪಕ್ಷೀಯ ನಿರ್ಧಾರದಿಂದ ಆಟೋ ಚಾಲಕರು ಕೂಡ ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.


ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸ್ಸುಗಳು ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಎಲ್ಲೂ ನಿಲ್ಲಿಸದೆ ಬಲಬದಿಯಲ್ಲೇ ಹೋಗಬೇಕು ಎಂದು ಸೂಚನೆ ನೀಡಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಲೇಡಿಗೋಗಶನ್ ಬಳಿಯ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಬಸ್ ಹತ್ತದಂತಾಗಿದೆ ಎಂದು ಅವರು ನುಡಿದರು.
ಸಂಚಾರ ಬದಲಾವಣೆ ಮಾಡುವಾಗ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯ ಕೇಳುವ ಸೌಜನ್ಯ ಕೂಡ ತೋರಿಸಲಿಲ್ಲ. ಹಲವು ಕಡೆ ಯೂ ಟರ್ನ್ ಗಳನ್ನು ಬಂದ್ ಮಾಡಲಾಗಿದೆ. ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ. ಹಂಪನಕಟ್ಟೆಯ ವಿವಿ ಕಾಲೇಜು ಮುಂಭಾಗದಲ್ಲಿರುವ ಬಸ್ ನಿಲ್ದಾಣವನ್ನು ಕೇವಲ ಒಬ್ಬ ವ್ಯಕ್ತಿಯ ಅಂಗಡಿ ವ್ಯಾಪಾರದ ಉದ್ದೇಶಕ್ಕಾಗಿ ಯಾವುದೇ ಮಾಹಿತಿ ನೀಡದೆ ರಾತೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು, ಆಸ್ಪತ್ರೆಗೆ ಬರುವವರು ಬಿಸಿಲು ಮಳೆಗೆ ನಿಲ್ಲುವಂತಾಗಿದೆ. ಇಲ್ಲಿ ಕೂಡ ಕಾಂಗ್ರೆಸ್ ನಾಯಕರ ಒತ್ತಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಮೌಖಿಕ ಆದೇಶದ ಮಾತು ಕೇಳಿ ಬರುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ವಿಘ್ನ ವಿನಾಯಕನಿಗೆ ವಿಘ್ನ ತರುವಂತೆ ಮಾಡು ಕಾರ್ಯದಲ್ಲಿ ತೊಡಗಿದೆ. ಸರಕಾರ ಸಾರ್ವಜನಿಕ ಗಣೇಶೋತ್ಸವ ಆಯೋಜಕರಿಗೆ ಹೊಸ ನಿಯಮದ ಮೂಲಕ ವಿಘ್ನ ತರುವ ಕಾರ್ಯ ಮಾಡಿದೆ.ಕಾರ್ಯಕ್ರಮಕ್ಕೆ ಬರುವ ಅತಿಥಿ ಗಳ ಮೊಬೈಲ್ ಸಂಖ್ಯೆ, ಹೆಸರುಗಳು ನೀಡುವಂತೆ ಒತ್ತಡ ಹೇರಿದೆ.
ಇನ್ನೂ ಶೋಭಾಯಾತ್ರೆ ಭಾಗವಹಿಸುವ ವಾಹನ ಗಳ ದಾಖಲೆ ಪತ್ರ ಇನ್ನಿತರ ದಾಖಲೆ ನೀಡಬೇಕಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಸರ್ಕಾರ ಸಂಪೂರ್ಣವಾಗಿ ಹಿಂದೂ ಧಾರ್ಮಿಕತೆ ದಕ್ಕೆ ತಂದು ನಮ್ಮ ನಂಬಿಕೆಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು