9:15 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಡಿಗ್ಗಿ ಸಂಗಮೇಶ್ವರನಿಗೆ 101 ಸಿಡಿಗಾಯಿ ಒಡೆದು ಹರಕೆ ತೀರಿಸಿದ ಸಿಂದಗಿ ನೂತನ ಶಾಸಕ ಭೂಸನೂರ

06/11/2021, 11:10

ವಿಜಯಪುರ(reporterkarnataka.com);
ರಾಜ್ಯದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಸಿಂದಗಿ ವಿಧಾನ ಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಜಯಗಳಿಸಿದ ಹಿನ್ನೆಲೆಯಲ್ಲಿ ಶಹಾಪೂರ ತಾಲೂಕಿನ ಡಿಗ್ಗಿ ಸಂಗಮೇಶ್ವರ ದೇವಾಲಯದ ೧೦೧ ಮೆಟ್ಟಲಗಳಿಗೆ ಸಿಡಿಗಾಯಿ ಒಡೆದು ಹರಕೆ ತೀರಿಸಿದರು.

ಡಂಬಳ ಗ್ರಾಮದ ಬಿಜೆಪಿ ಮುಖಂಡ ಸಂತೋಷಗೌಡ ಪಾಟೀಲ ಡಂಬಳ ಅವರು ಹರಕೆ ಹೊತ್ತಿಕೊಂಡಿರುವ ನಿಮಿತ್ತವಾಗಿ ಡಿಗ್ಗಿ ಸಂಗಮೇಶ್ವರಗೆ ಹರಕೆ ನೀಡಲಾಯಿತು.

ಸಂಗಮೇಶ್ವರ ದೇವಾಲಯಕ್ಕೆ ಆಗಮಿಸಿದ ನೂತನ ಶಾಸಕರು ಡಿಗ್ಗಿ ಸಂಗಮೇಶ್ವರ ಗುಡ್ಡದ ಮೇಲೆ ಇರುವದರಿಂದ ೧೦೧ ಮೆಟ್ಟಲಿಗೆ ಸಿಡಿಗಾಯಿ ಒಡೆದು ಸಂಗಮೇಶ್ವರ ದೇವರಿಗೆ ಭಕ್ತಿ ಭಾವದಿಂದ ಹೂವು ಕಾಯಿ

ಕರ್ಪುರ ಮಹಾ ಪೂಜಾ ನೆರವೇರಿಸಿದರು.ಬಿಜೆಪಿ ಕಾರ್ಯಕರ್ತರು ಸಿಡಿಗಾಯಿ ಒಡೆದು ಸಂಭ್ರಮ ಪಟ್ಟರು. ಡಿಗ್ಗಿ ಸಂಗಮೇಶ್ವರ ದೇವಾಲಯದ ಪ್ರಧಾನ ಅರ್ಚಕರಾದ ವೇ.ದೇವಯ್ಯ ಹಿರೇಮಠ ಅವರು ಶಾಸಕ ರಮೇಶ ಭೂಸನೂರ ಅವರನ್ನು ಸನ್ಮಾನಿಸಿದರು.

ಬಿಜೆಪಿ ಮುಖಂಡ ಸಂತೋಷಗೌಡ ಪಾಟೀಲ. ಸಿದ್ದು ಬುಳ್ಳಾ. ಪ್ರಶಾಂತಗೌಡ ಬಿರಾದಾರ ಬಂದಾಳ ರವಿ ನಾಯ್ಕೋಡಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು