7:53 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಡಿಗ್ಗಿ ಸಂಗಮೇಶ್ವರನಿಗೆ 101 ಸಿಡಿಗಾಯಿ ಒಡೆದು ಹರಕೆ ತೀರಿಸಿದ ಸಿಂದಗಿ ನೂತನ ಶಾಸಕ ಭೂಸನೂರ

06/11/2021, 11:10

ವಿಜಯಪುರ(reporterkarnataka.com);
ರಾಜ್ಯದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಸಿಂದಗಿ ವಿಧಾನ ಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಜಯಗಳಿಸಿದ ಹಿನ್ನೆಲೆಯಲ್ಲಿ ಶಹಾಪೂರ ತಾಲೂಕಿನ ಡಿಗ್ಗಿ ಸಂಗಮೇಶ್ವರ ದೇವಾಲಯದ ೧೦೧ ಮೆಟ್ಟಲಗಳಿಗೆ ಸಿಡಿಗಾಯಿ ಒಡೆದು ಹರಕೆ ತೀರಿಸಿದರು.

ಡಂಬಳ ಗ್ರಾಮದ ಬಿಜೆಪಿ ಮುಖಂಡ ಸಂತೋಷಗೌಡ ಪಾಟೀಲ ಡಂಬಳ ಅವರು ಹರಕೆ ಹೊತ್ತಿಕೊಂಡಿರುವ ನಿಮಿತ್ತವಾಗಿ ಡಿಗ್ಗಿ ಸಂಗಮೇಶ್ವರಗೆ ಹರಕೆ ನೀಡಲಾಯಿತು.

ಸಂಗಮೇಶ್ವರ ದೇವಾಲಯಕ್ಕೆ ಆಗಮಿಸಿದ ನೂತನ ಶಾಸಕರು ಡಿಗ್ಗಿ ಸಂಗಮೇಶ್ವರ ಗುಡ್ಡದ ಮೇಲೆ ಇರುವದರಿಂದ ೧೦೧ ಮೆಟ್ಟಲಿಗೆ ಸಿಡಿಗಾಯಿ ಒಡೆದು ಸಂಗಮೇಶ್ವರ ದೇವರಿಗೆ ಭಕ್ತಿ ಭಾವದಿಂದ ಹೂವು ಕಾಯಿ

ಕರ್ಪುರ ಮಹಾ ಪೂಜಾ ನೆರವೇರಿಸಿದರು.ಬಿಜೆಪಿ ಕಾರ್ಯಕರ್ತರು ಸಿಡಿಗಾಯಿ ಒಡೆದು ಸಂಭ್ರಮ ಪಟ್ಟರು. ಡಿಗ್ಗಿ ಸಂಗಮೇಶ್ವರ ದೇವಾಲಯದ ಪ್ರಧಾನ ಅರ್ಚಕರಾದ ವೇ.ದೇವಯ್ಯ ಹಿರೇಮಠ ಅವರು ಶಾಸಕ ರಮೇಶ ಭೂಸನೂರ ಅವರನ್ನು ಸನ್ಮಾನಿಸಿದರು.

ಬಿಜೆಪಿ ಮುಖಂಡ ಸಂತೋಷಗೌಡ ಪಾಟೀಲ. ಸಿದ್ದು ಬುಳ್ಳಾ. ಪ್ರಶಾಂತಗೌಡ ಬಿರಾದಾರ ಬಂದಾಳ ರವಿ ನಾಯ್ಕೋಡಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು