4:47 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು: ಪನೀಂಧರ್

18/11/2024, 14:43

ಬಂಟ್ವಾಳ(reporterkarnataka.com):ಬಂಟ್ವಾಳ ವಕೀಲರ ಸಂಘ ಮತ್ತು ಕ್ಲೂ ಫಾರ್ ಎವಿಡೆನ್ಸ್ ಫೌಂಡೇಶನ್ (CLUE 4 EVIDENCE FOUNDATION) ಜಂಟಿ ಆಶ್ರಯದಲ್ಲಿ ಬಂಟ್ವಾಳ ವಕೀಲರ ಸಂಘದಲ್ಲಿ ವಿಧಿ ವಿಜ್ಞಾನ ಜಾಗ್ರತಿ ಕಾರ್ಯಾಗಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ CLUE 4 FOUNDATION ನ ನಿರ್ದೇಶಕರಾದ ಪನೀಂಧರ್ ಬಿ.ಎನ್. ಅವರು ವಕೀಲರಿಗೆ ವಿಧಿ ವಿಜ್ಞಾನದ ಜಾಗ್ರತಿಯ ಅಗತ್ಯತೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಕೇಂದ್ರ ಸರಕಾರ ಹೊಸದಾಗಿ ಜಾರಿಗೆ ತಂದ ಭಾರತೀಯ ನ್ಯಾಯ ಸಂಹಿತೆ ಕಾನೂನಿನಲ್ಲಿ 3 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆಯ ಅಪರಾಧಗಳಿಗೆ ವಿಧಿ ವಿಜ್ಞಾನದ ವರದಿ ಕಡ್ಡಾಯವಾಗಿದೆ. ಆದುದರಿಂದ ವಕೀಲರಿಗೆ ವಿಧಿ ವಿಜ್ಞಾನದ ಬಗ್ಗೆ ಮಾಹಿತಿ ಅತೀ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಅಪರಾಧ ಕಡಿಮೆಯಾಗಲಿದ್ದು, ಡಿಜಿಟಲ್ ಅಪರಾಧಗಳು ಹೆಚ್ಚಾಗಳಿದ್ದು ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು ಎಂದು ವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿದ್ದರು.
ಬಂಟ್ವಾಳ ವಕೀಲರ ಸಂಘ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ರವೀಂದ್ರ ಕುಕ್ಕಾಜೆ ನಿರ್ವಹಿಸಿದರು. ಅತಿಥಿ ಅಭ್ಯಾಗತರಿಗೆ ವೀರೇಂದ್ರ ಎಂ.ಸಿದ್ದಕಟ್ಟೆಯವರು ವಂದನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು