11:56 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಕಲರ್ ನೀರಿನಲ್ಲಿ ಕೈ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚು, ಮುಖಕ್ಕೆ ಬಣ್ಣ, ಹಾಡಿಗೆ ಹೆಜ್ಜೆ: ಚೇತನಾ ಶಾಲೆಯಲ್ಲಿ ಹೋಳಿ ಸಂಭ್ರಮ!

14/03/2025, 21:47

ಮಂಗಳೂರು(reporterkarnataka.com): ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.


ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ ಆರಂಭವಾಯಿತು. ನಂತರ ಮಕ್ಕಳ ಕೈಗಳಲ್ಲಿ ರಾಸಾಯನಿಕ ರಹಿತ, ಪರಿಸರ ಸ್ನೇಹಿ ಬಣ್ಣಗಳನ್ನು ನೀಡುತ್ತಿದ್ದಂತೆ ಪರಸ್ಪರ ಹಚ್ಚಿ ಖುಷಿಪಟ್ಟರು. ನಂತರ ಹಾಡುಗಳಿಗೆ ಮಕ್ಕಳು ಹೆಜ್ಜೆ ಹಾಕುತ್ತಾ, ನೀರಿನ ಬೆಲೂನುಗಳನ್ನು ಎಸೆದು ಅದು ಸಿಡಿಯುತ್ತಿದ್ದಂತೆ ಚಪ್ಪಾಳೆ, ಕೇಕೆಗಳೊಂದಿಗೆ ಹರುಷಪಟ್ಟರು. ವಯಸ್ಸು, ಜಾತಿ, ಭಾಷೆ, ಧರ್ಮದ ಭೇದವಿಲ್ಲದೆ, ಶಿಕ್ಷಕರ ಪ್ರೀತಿ ವಾತ್ಸಲ್ಯದೊಂದಿಗೆ, ಆರೈಕೆ, ಆರೋಗ್ಯದ ಕಾಳಜಿಯೊಂದಿಗೆ ಮಕ್ಕಳಲ್ಲಿ ನೈತಿಕ ಸ್ಥೈರ್ಯ, ಹುಮ್ಮಸ್ಸನ್ನು ನೀಡುತ್ತಾ ಬರುತ್ತಿರುವ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಚೇತನಾ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಕಲಿಯುತ್ತಿರುವ ನೂರಕ್ಕೂ ಮಿಕ್ಕಿದ ವಿಶೇಷ ಮಕ್ಕಳಲ್ಲಿ ಹೋಳಿಯ ಸಂಭ್ರಮವನ್ನು ಹೆಚ್ಚಿಸಲು ಯೂತ್ ಆಫ್ ಜಿಎಸ್ ಬಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಯೂತ್ ಆಫ್ ಜಿಎಸ್ ಬಿಯ ಪ್ರಮುಖರು, ಹಿತೈಷಿಗಳು, ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು