10:16 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಕಲರ್ ನೀರಿನಲ್ಲಿ ಕೈ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚು, ಮುಖಕ್ಕೆ ಬಣ್ಣ, ಹಾಡಿಗೆ ಹೆಜ್ಜೆ: ಚೇತನಾ ಶಾಲೆಯಲ್ಲಿ ಹೋಳಿ ಸಂಭ್ರಮ!

14/03/2025, 21:47

ಮಂಗಳೂರು(reporterkarnataka.com): ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.


ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ ಆರಂಭವಾಯಿತು. ನಂತರ ಮಕ್ಕಳ ಕೈಗಳಲ್ಲಿ ರಾಸಾಯನಿಕ ರಹಿತ, ಪರಿಸರ ಸ್ನೇಹಿ ಬಣ್ಣಗಳನ್ನು ನೀಡುತ್ತಿದ್ದಂತೆ ಪರಸ್ಪರ ಹಚ್ಚಿ ಖುಷಿಪಟ್ಟರು. ನಂತರ ಹಾಡುಗಳಿಗೆ ಮಕ್ಕಳು ಹೆಜ್ಜೆ ಹಾಕುತ್ತಾ, ನೀರಿನ ಬೆಲೂನುಗಳನ್ನು ಎಸೆದು ಅದು ಸಿಡಿಯುತ್ತಿದ್ದಂತೆ ಚಪ್ಪಾಳೆ, ಕೇಕೆಗಳೊಂದಿಗೆ ಹರುಷಪಟ್ಟರು. ವಯಸ್ಸು, ಜಾತಿ, ಭಾಷೆ, ಧರ್ಮದ ಭೇದವಿಲ್ಲದೆ, ಶಿಕ್ಷಕರ ಪ್ರೀತಿ ವಾತ್ಸಲ್ಯದೊಂದಿಗೆ, ಆರೈಕೆ, ಆರೋಗ್ಯದ ಕಾಳಜಿಯೊಂದಿಗೆ ಮಕ್ಕಳಲ್ಲಿ ನೈತಿಕ ಸ್ಥೈರ್ಯ, ಹುಮ್ಮಸ್ಸನ್ನು ನೀಡುತ್ತಾ ಬರುತ್ತಿರುವ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಚೇತನಾ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಕಲಿಯುತ್ತಿರುವ ನೂರಕ್ಕೂ ಮಿಕ್ಕಿದ ವಿಶೇಷ ಮಕ್ಕಳಲ್ಲಿ ಹೋಳಿಯ ಸಂಭ್ರಮವನ್ನು ಹೆಚ್ಚಿಸಲು ಯೂತ್ ಆಫ್ ಜಿಎಸ್ ಬಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಯೂತ್ ಆಫ್ ಜಿಎಸ್ ಬಿಯ ಪ್ರಮುಖರು, ಹಿತೈಷಿಗಳು, ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು