11:56 AM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

ಕಲರ್ ನೀರಿನಲ್ಲಿ ಕೈ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚು, ಮುಖಕ್ಕೆ ಬಣ್ಣ, ಹಾಡಿಗೆ ಹೆಜ್ಜೆ: ಚೇತನಾ ಶಾಲೆಯಲ್ಲಿ ಹೋಳಿ ಸಂಭ್ರಮ!

14/03/2025, 21:47

ಮಂಗಳೂರು(reporterkarnataka.com): ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.


ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ ಆರಂಭವಾಯಿತು. ನಂತರ ಮಕ್ಕಳ ಕೈಗಳಲ್ಲಿ ರಾಸಾಯನಿಕ ರಹಿತ, ಪರಿಸರ ಸ್ನೇಹಿ ಬಣ್ಣಗಳನ್ನು ನೀಡುತ್ತಿದ್ದಂತೆ ಪರಸ್ಪರ ಹಚ್ಚಿ ಖುಷಿಪಟ್ಟರು. ನಂತರ ಹಾಡುಗಳಿಗೆ ಮಕ್ಕಳು ಹೆಜ್ಜೆ ಹಾಕುತ್ತಾ, ನೀರಿನ ಬೆಲೂನುಗಳನ್ನು ಎಸೆದು ಅದು ಸಿಡಿಯುತ್ತಿದ್ದಂತೆ ಚಪ್ಪಾಳೆ, ಕೇಕೆಗಳೊಂದಿಗೆ ಹರುಷಪಟ್ಟರು. ವಯಸ್ಸು, ಜಾತಿ, ಭಾಷೆ, ಧರ್ಮದ ಭೇದವಿಲ್ಲದೆ, ಶಿಕ್ಷಕರ ಪ್ರೀತಿ ವಾತ್ಸಲ್ಯದೊಂದಿಗೆ, ಆರೈಕೆ, ಆರೋಗ್ಯದ ಕಾಳಜಿಯೊಂದಿಗೆ ಮಕ್ಕಳಲ್ಲಿ ನೈತಿಕ ಸ್ಥೈರ್ಯ, ಹುಮ್ಮಸ್ಸನ್ನು ನೀಡುತ್ತಾ ಬರುತ್ತಿರುವ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಚೇತನಾ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಕಲಿಯುತ್ತಿರುವ ನೂರಕ್ಕೂ ಮಿಕ್ಕಿದ ವಿಶೇಷ ಮಕ್ಕಳಲ್ಲಿ ಹೋಳಿಯ ಸಂಭ್ರಮವನ್ನು ಹೆಚ್ಚಿಸಲು ಯೂತ್ ಆಫ್ ಜಿಎಸ್ ಬಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಯೂತ್ ಆಫ್ ಜಿಎಸ್ ಬಿಯ ಪ್ರಮುಖರು, ಹಿತೈಷಿಗಳು, ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು