4:41 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಲರ್ ನೀರಿನಲ್ಲಿ ಕೈ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚು, ಮುಖಕ್ಕೆ ಬಣ್ಣ, ಹಾಡಿಗೆ ಹೆಜ್ಜೆ: ಚೇತನಾ ಶಾಲೆಯಲ್ಲಿ ಹೋಳಿ ಸಂಭ್ರಮ!

14/03/2025, 21:47

ಮಂಗಳೂರು(reporterkarnataka.com): ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.


ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ ಆರಂಭವಾಯಿತು. ನಂತರ ಮಕ್ಕಳ ಕೈಗಳಲ್ಲಿ ರಾಸಾಯನಿಕ ರಹಿತ, ಪರಿಸರ ಸ್ನೇಹಿ ಬಣ್ಣಗಳನ್ನು ನೀಡುತ್ತಿದ್ದಂತೆ ಪರಸ್ಪರ ಹಚ್ಚಿ ಖುಷಿಪಟ್ಟರು. ನಂತರ ಹಾಡುಗಳಿಗೆ ಮಕ್ಕಳು ಹೆಜ್ಜೆ ಹಾಕುತ್ತಾ, ನೀರಿನ ಬೆಲೂನುಗಳನ್ನು ಎಸೆದು ಅದು ಸಿಡಿಯುತ್ತಿದ್ದಂತೆ ಚಪ್ಪಾಳೆ, ಕೇಕೆಗಳೊಂದಿಗೆ ಹರುಷಪಟ್ಟರು. ವಯಸ್ಸು, ಜಾತಿ, ಭಾಷೆ, ಧರ್ಮದ ಭೇದವಿಲ್ಲದೆ, ಶಿಕ್ಷಕರ ಪ್ರೀತಿ ವಾತ್ಸಲ್ಯದೊಂದಿಗೆ, ಆರೈಕೆ, ಆರೋಗ್ಯದ ಕಾಳಜಿಯೊಂದಿಗೆ ಮಕ್ಕಳಲ್ಲಿ ನೈತಿಕ ಸ್ಥೈರ್ಯ, ಹುಮ್ಮಸ್ಸನ್ನು ನೀಡುತ್ತಾ ಬರುತ್ತಿರುವ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಚೇತನಾ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಕಲಿಯುತ್ತಿರುವ ನೂರಕ್ಕೂ ಮಿಕ್ಕಿದ ವಿಶೇಷ ಮಕ್ಕಳಲ್ಲಿ ಹೋಳಿಯ ಸಂಭ್ರಮವನ್ನು ಹೆಚ್ಚಿಸಲು ಯೂತ್ ಆಫ್ ಜಿಎಸ್ ಬಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಯೂತ್ ಆಫ್ ಜಿಎಸ್ ಬಿಯ ಪ್ರಮುಖರು, ಹಿತೈಷಿಗಳು, ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು