6:10 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕಲರ್ ನೀರಿನಲ್ಲಿ ಕೈ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚು, ಮುಖಕ್ಕೆ ಬಣ್ಣ, ಹಾಡಿಗೆ ಹೆಜ್ಜೆ: ಚೇತನಾ ಶಾಲೆಯಲ್ಲಿ ಹೋಳಿ ಸಂಭ್ರಮ!

14/03/2025, 21:47

ಮಂಗಳೂರು(reporterkarnataka.com): ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.


ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ ಆರಂಭವಾಯಿತು. ನಂತರ ಮಕ್ಕಳ ಕೈಗಳಲ್ಲಿ ರಾಸಾಯನಿಕ ರಹಿತ, ಪರಿಸರ ಸ್ನೇಹಿ ಬಣ್ಣಗಳನ್ನು ನೀಡುತ್ತಿದ್ದಂತೆ ಪರಸ್ಪರ ಹಚ್ಚಿ ಖುಷಿಪಟ್ಟರು. ನಂತರ ಹಾಡುಗಳಿಗೆ ಮಕ್ಕಳು ಹೆಜ್ಜೆ ಹಾಕುತ್ತಾ, ನೀರಿನ ಬೆಲೂನುಗಳನ್ನು ಎಸೆದು ಅದು ಸಿಡಿಯುತ್ತಿದ್ದಂತೆ ಚಪ್ಪಾಳೆ, ಕೇಕೆಗಳೊಂದಿಗೆ ಹರುಷಪಟ್ಟರು. ವಯಸ್ಸು, ಜಾತಿ, ಭಾಷೆ, ಧರ್ಮದ ಭೇದವಿಲ್ಲದೆ, ಶಿಕ್ಷಕರ ಪ್ರೀತಿ ವಾತ್ಸಲ್ಯದೊಂದಿಗೆ, ಆರೈಕೆ, ಆರೋಗ್ಯದ ಕಾಳಜಿಯೊಂದಿಗೆ ಮಕ್ಕಳಲ್ಲಿ ನೈತಿಕ ಸ್ಥೈರ್ಯ, ಹುಮ್ಮಸ್ಸನ್ನು ನೀಡುತ್ತಾ ಬರುತ್ತಿರುವ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಚೇತನಾ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಕಲಿಯುತ್ತಿರುವ ನೂರಕ್ಕೂ ಮಿಕ್ಕಿದ ವಿಶೇಷ ಮಕ್ಕಳಲ್ಲಿ ಹೋಳಿಯ ಸಂಭ್ರಮವನ್ನು ಹೆಚ್ಚಿಸಲು ಯೂತ್ ಆಫ್ ಜಿಎಸ್ ಬಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಯೂತ್ ಆಫ್ ಜಿಎಸ್ ಬಿಯ ಪ್ರಮುಖರು, ಹಿತೈಷಿಗಳು, ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು