4:41 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ ಅಭಿಯಾನ

07/01/2026, 22:55

ಬೆಂಗಳೂರು(reporterkarnataka.com): ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಸದಸ್ಯರು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನವಕ್ಕೆ ಇಂದು ಚಾಲನೆ ನೀಡಿದರು. ಅಭಿಯಾನದ ಆರಂಭವನ್ನು ನಗರದ ಆರ್‌.ಸಿ. ಕಾಲೇಜಿನ ಬಳಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ ” ಅತ್ಯಂತ ದುಬಾರಿ ವೆಚ್ಚದ ನಮ್ಮ ಮೆಟ್ರೋದಿಂದಾಗಿ ವಿದ್ಯಾರ್ಥಿ ಸಮೂಹ ಸಂಪೂರ್ಣ ಮೆಟ್ರೋ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬೆಂಗಳೂರಿನ ಸಂಚಾರ ಒತ್ತಡಗಳಿಂದಾಗಿ ಸಮಯಕ್ಕೆ ಸರಿಯಾಗಿ ತಲುಪಲಾಗದೆ ಸಾಕಷ್ಟು ಪರದಾಡುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವು ಸಹ ಕುಸಿ ಯುತ್ತಿದ್ದು ಈ ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ಗಳನ್ನು ವಿತರಿಸಬೇಕು. ಇದಕ್ಕಾಗಿ ಸರ್ಕಾರವನ್ನು ಒತ್ತಾಯಿಸಲು ನಾವು ಲಕ್ಷಾಂತರ ವಿದ್ಯಾರ್ಥಿ ಸಮೂಹಗಳಿಂದ ಸಹಿ ಸಂಗ್ರಹಣ ಅಭಿಯಾನವನ್ನು ನಡೆಸುತ್ತಿದ್ದೇವೆ. ಆಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳ ಬೇಕು. ಈ ಕೂಡಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಧಾವಿಸ ಸಬೇಕಾಗಿದೆ ” ಎಂದು ಅಗ್ರಹಿಸಿದರು.


ಇದೇ ಸಂದರ್ಭದಲ್ಲಿ ಯುವ ಘಟಕದ ಉಪಾಧ್ಯಕ್ಷ ಉಮೇಶ್ ಗೌಡ ಮಾತನಾಡಿ ” ನಾವು ಸತತವಾಗಿ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳ ಬಳಿ ತೆರಳಿ ಸರ್ಕಾರದ ಮೇಲೆ ಒತ್ತಡ ತರಲು ಸಹಿ ಸಂಗ್ರಹಣೆಯನ್ನು ಮಾಡುತ್ತಿದ್ದೇವೆ. ವಿದ್ಯಾರ್ಥಿ ಸಮೂಹ ಈ ಅಭಿಯಾನಕ್ಕೆ ಸಂಪೂರ್ಣ ಬೆಂಬಲವನ್ನು ಈಗಾಗಲೇ ಸೂಚಿಸುತ್ತಿದ್ದಾರೆ. ಎಲ್ಲರೂ ತಮ್ಮ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳ ಖಾತೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ತರಬೇಕು. ಪಕ್ಷಾತೀತವಾಗಿ ಎಲ್ಲ ನಾಯಕರುಗಳು ವಿದ್ಯಾರ್ಥಿಗಳ ಅನುಕೂಲಕ್ಕೆ ಕೂಡಲೇ ಭಾವಿಸಬೇಕು ” ಎಂದು ಒತ್ತಾಯಿಸಿದರು.
ಅಭಿಯಾನದಲ್ಲಿ ಪಕ್ಷದ ಯುವ ಘಟಕದ ಬೆಂಗಳೂರು ನಗರಾಧ್ಯಕ್ಷ ಓಂಕಾರ್ ಮಂಜುನಾಥ್ , ಮುಖಂಡರುಗಳಾದ ನವೀನ್ ಅಯ್ಯರ್, ಇಂದು, ಭಾನುಪ್ರಿಯ, ರೋಹಿತ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು