7:41 AM Tuesday1 - April 2025
ಬ್ರೇಕಿಂಗ್ ನ್ಯೂಸ್
ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌ Chikkamagaluru | ಬಾಲ ಹಿಡಿದು ಎತ್ತಿದ ಉರಗ ತಜ್ಞರು: ನುಂಗಿದ್ದ 10 ಮೊಟ್ಟೆಗಳನ್ನು… Speaker Talking | ವಿಧಾನ ಸೌಧಕ್ಕೆ ವರ್ಣರಂಜಿತ ದೀಪಾಲಂಕಾರ; ಯಾವಾಗ ಉದ್ಘಾಟನೆ?; ಸ್ಪೀಕರ್… ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ: ಹಾಲು ದರ ಏರಿಕೆಗೆ ಕೇಂದ್ರ… ಕೋಲಾರ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಎಕರೆ ಅರಣ್ಯ ಭೂಮಿ ಒತ್ತುವರಿ; ತೇರಹಳ್ಳಿ…

ಇತ್ತೀಚಿನ ಸುದ್ದಿ

ನಿವೃತ್ತ ಸರಕಾರಿ ನೌಕರರ ಆರ್ಥಿಕ ನಷ್ಟ ಪರಿಹಾರಕ್ಕೆ ಸಿಎಂ ಜತೆ ಚರ್ಚೆ: ಎಂಎಲ್‌ಸಿ ಐವನ್ ಡಿಸೋಜ

29/03/2025, 23:13

ಮಂಗಳೂರು(reporterkarnataka.com): ನಿವೃತ್ತ ಸರಕಾರಿ ನೌಕರರು ಸರಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ, ಬದಲಾಗಿ ತಾವು ದುಡಿದ ಹಕ್ಕಿನ ಮೌಲ್ಯವನ್ನು ಕೇಳುತ್ತಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರುವ ಮೂಲಕ ನಿವೃತ್ತ ಸರಕಾರಿ ನೌಕರರಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.


ಅವರು ಶನಿವಾರ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆ ದ.ಕ.ಜಿಲ್ಲೆ ಮಂಗಳೂರು ಮತ್ತು ದ.ಕ.ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ ಮಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾಭವನದಲ್ಲಿ ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌಕರರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ೨೬ ಸಾವಿರ ಮಂದಿ ನಿವೃತ್ತ ಸರಕಾರಿ ನೌಕರರಿಗೆ ಸಮಸ್ಯೆಯಗಿದ್ದು, ದ.ಕ.ದಲ್ಲಿ ೬೦೦ಕ್ಕೂ ಹೆಚ್ಚು ಮಂದಿ ಸಂಕಷ್ಟಕ್ಕೆ ಗುರಿಯಾಗಿರುವುದು ಬೇಸರದ ವಿಚಾರವಾಗಿದೆ. ಸಮಾಜ ಹಾಗೂ ಸರಕಾರಕ್ಕೆ ಈ ನಿವೃತ್ತ ನೌಕರರ ಸೇವೆ ಅಪಾರವಿದೆ. ಅವರಿಗೆ ಎಂದಿಗೂ ಅನ್ಯಾಯವಾಗಬಾರದು. ಮುಖ್ಯಮಂತ್ರಿಗಳಿಗೆ ಈ ಕುರಿತು ಮನವರಿಕೆ ಮಾಡಿಕೊಂಡು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದರು.
ಇದೇ ಸಂದರ್ಭ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯಿಂದ ಮನವಿಯನ್ನು ನೀಡಲಾಯಿತು.
ಈ ಸಂದರ್ಭ ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ವೇದಿಕೆಯ ರಾಜ್ಯ ಮಹಾಪ್ರಧಾನ ಸಂಚಾಲಕ ಡಾ.ಎಂ.ಪಿ.ಎ.ಷಣ್ಮುಖಯ್ಯ ಮಾತನಾಡಿ, ಜು.೧,೨೦೨೨ರಿಂದ ಜು.೩೧,೨೦೨೪ರ ಅವಧಿಯಲ್ಲಿ ನಿವೃತ್ತ ಸರಕಾರಿ ಅಧಿಕಾರಿ/ನೌಕರ ವರ್ಗದ ನಿವೃತ್ತರಿಗೆ ೭ನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನಿವೃತ್ತಿ ಉಪಲಬ್ದಗಳನ್ನು ಪಾವತಿಸುವ ಸಂದರ್ಭದಲ್ಲಿ ಆರ್ಥಿಕ ನಷ್ಟವನ್ನು ರಾಜ್ಯ ಸರಕಾರ ಮಾಡಿದೆ. ಈ ಕಾರಣದಿಂದ ನಿವೃತ್ತ ಸರಕಾರಿ ನೌಕರರ ಜತೆಗೂಡಿಕೊಂಡು ಮೂರನೇ ಬಾರಿಗೆ ಬೆಂಗಳೂರು ಚಲೋ ಮಾಡುತ್ತಿದ್ದೇವೆ. ಏ.೩ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಏ.೪ರಂದು ಅರಮನೆ ಮೈದಾನದಲ್ಲಿ ರಾಜ್ಯ ಸಮ್ಮೇಳನದಲ್ಲಿ ನಮ್ಮ ಬೇಡಿಕೆಯನ್ನು ಸಿಎಂ ಮುಂದೆ ಮಂಡಿಸಲಿದ್ದೇವೆ. ಅಲ್ಲಿ ನ್ಯಾಯ ಸಿಗದೇ ಹೋದಲ್ಲಿ ಮುಂದೆ ಅನಿರ್ದಿಷ್ಟಾವಧಿಯ ಹೋರಾಟ, ನ್ಯಾಯಾಲಯಕ್ಕೆ ಮೊರೆ ಹೋಗಲು ನಿರ್ಧಾರ ಮಾಡಲಾಗಿದೆ ಎಂದರು.
ಈ ಸಂದರ್ಭ ಕರ್ನಾಟಕ ರಾಜ್ಯ ನಿವೃತ್ತ ನೌಕರರ ವೇದಿಕೆಯ ರಾಜ್ಯ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲ್ಲಿ ಎ,ಬಿ,ಸಿ,ಡಿ ವರ್ಗದ ನಿವೃತ್ತ ಸರಕಾರಿ ನೌಕರರಿಗೆ ಲಕ್ಷಗಟ್ಟಲೆ ಮೊತ್ತವನ್ನು ಸರಕಾರ ನೀಡದೇ ಅನ್ಯಾಯ ಮಾಡಿದೆ. ಯಾವುದೇ ದುಡ್ಡನ್ನು ನಾವ್ ಬೇಡ್ತಾ ಇಲ್ಲ ನಮ್ಮ ಕೆಲ್ಸದ ಹಣವನ್ನು ಮಾತ್ರ ಕೇಳ್ತಾ ಇದ್ದೇವೆ. ಬೆಂಗಳೂರು ಚಲೋದ ಮೂಲಕ ನಮ್ಮ ಹೋರಾಟ ಮುಂದುವರಿಯಲಿದೆ. ಸರಕಾರ ಈ ಕುರಿತು ಗಮನಹರಿಸಿಕೊಂಡು ನ್ಯಾಯ ನೀಡಬೇಕು ಎಂದರು.
ಕರ್ನಾಟಕ ನಿವೃತ್ತ ಸರಕಾರಿ ನೌಕರರ ವೇದಿಕೆಯ ಉಳ್ಳಾಲ ಸಂಚಾಲಕರಾದ ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ದ.ಕ.ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಸೀತಾರಾಮ್, , ಮೋಹನ ಬಂಗೇರ, ಡೇಸಿ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಸಂಚಾಲಕ ಸ್ಟಾ÷್ಯನಿ ತಾವ್ರೋ ಸ್ವಾಗತಿಸಿದರು. ನಾರಾಯಣ ಪೂಜಾರಿ ವಂದಿಸಿದರು. ಬಿ.ಮನಮೋಹನ ರಾವ್ ನಿರೂಪಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಸಾವಿರಕ್ಕೂ ಮಿಕ್ಕಿದ ನಿವೃತ್ತ ಸರಕಾರಿ ನೌಕರರು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು