6:27 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಪಲ್ಗುಣಿ ಒಕ್ಕೂಟದ ವಾಟ್ಸಪ್ ಗ್ರೂಪಿನ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಕಲ್ಲಂಗಡಿ ಹಣ್ಣು, ದ್ರಾಕ್ಷಿ ಮತ್ತು ಮಜ್ಜಿಗೆ ವಿತರಣೆ

25/02/2025, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಾಶಿವರಾತ್ರಿ ಅಂಗವಾಗಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ಹೊರ ಜಿಲ್ಲೆಗಳಿಂದ ಬರುವ ಭಕ್ತಾದಿಗಳಿಗೆ ಮಲೆನಾಡು ಪ್ರದೇಶದಲ್ಲಿ ವಿಶಿಷ್ಟ ಭಕ್ತಿಯ ಸ್ಮರಣೆ ಮೂಡಿಸಿತು. ದೈವ ಮಾನವ ಎಂದೇ ಹೆಸರುವಾಸಿಯಾಗಿದ್ದ ದಿ. ಮಹೇಂದ್ರ ಕುಮಾರ್ ಪಲ್ಗುಣಿ ಅವರ ಸವಿನೆನಪಿನಲ್ಲಿ ಪಲ್ಗುಣಿ ಒಕ್ಕೂಟದ ವಾಟ್ಸಪ್ ಗ್ರೂಪಿನ ಅಭಿಮಾನಿಗಳು ಭಕ್ತಾದಿಗಳಿಗೆ ಕಲ್ಲಂಗಡಿ ಹಣ್ಣು, ದ್ರಾಕ್ಷಿ ಹಣ್ಣು ಮತ್ತು ಮಜ್ಜಿಗೆ ಹಂಚುವ ಮೂಲಕ ಅವರ ಭಕ್ತಿಯ ನಮನವನ್ನು ಸಲ್ಲಿಸಿದರು.


ಈ ಪುಣ್ಯ ಕಾರ್ಯದಲ್ಲಿ ಚಿತ್ರರಂಗದ ಖ್ಯಾತ ನಿರ್ದೇಶಕರಾದ ಮರಡಿಹಳ್ಳಿ ನಾಗಚಂದ್ರ ಸೇರಿದಂತೆ ಹಲವರು ಭಾಗವಹಿಸಿದರು. ಅವರ ಜೊತೆ ನಟ ತರುಣ್ ಶಿಶೀರ್, ಛಾಯಾಗ್ರಾಹಕರು ಪಿಕೆ ಹೆಚ್ ದಾಸ್, ರವಿಕುಮಾರ್ ಬೆಂಗಳೂರು, ರಾಕೇಶ್ ರೇವಣ್ಣ, ರಿಜ್ವಾನ್, ಪ್ರವೀಣ್ ಪೂಜಾರಿ, ನಿರಂಜನ್ ಜಿಂದಾಲ್, ಮತ್ತು ಪ್ರಕರ್ತಾ ಸಂತೋಷ್ ಅತ್ತಿಗೆರೆ ಹಾಜರಿದ್ದರು.
ಮರಡಿಹಳ್ಳಿ ನಾಗಚಂದ್ರ ಅವರ ಗುರು ಭಕ್ತಿ ಮತ್ತು ಬದುಕಿನ ಮೇಲೆ ಅವರ ಪ್ರಭಾವದ ಕಥೆ ವಿಶೇಷವಾಗಿದೆ. ಅವರು ಗುರುಗಳೊಂದಿಗೆ 25 ವರ್ಷಗಳ ಪರಿಚಯವನ್ನು ಹೊಂದಿದ್ದು, ಅವರ ಸಲಹೆ ಮತ್ತು ಮಾರ್ಗದರ್ಶನದಿಂದ “ನಾಗಚಂದ್ರ” ಎಂಬ ಹೆಸರನ್ನು ಬದಲಾಯಿಸಿ “ಮರಡಿಹಳ್ಳಿ ನಾಗಚಂದ್ರ” ಎಂಬ ಹೊಸ ಗುರುತನ್ನು ಗಳಿಸಿದರು. ಗುರುಗಳ ಸ್ಪೂರ್ತಿಯಿಂದ ಅವರ ಬದುಕಿಗೆ ದಾರಿ ದೀಪ ಸಿಕ್ಕಿತು. ಚಿತ್ರರಂಗದಲ್ಲಿ ಗುರುಗಳ ನಂಟು ಅಪಾರವಾಗಿದ್ದು, ಅವರಿಂದ ಪಡೆದ ಸ್ಫೂರ್ತಿಯಿಂದ नागಚಂದ್ರ ಅವರ ಚಿತ್ರಜೀವನ ಗಾಢವಾಗಿದೆ.

ಈ ಪ್ರಸಂಗವು ಗುರು-ಶಿಷ್ಯರ ಅಜರಾಮರ ಸಂಬಂಧವನ್ನು ಸ್ಮರಿಸಿತು. “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ಸಂದೇಶವು ಈ ಕಾರ್ಯಕ್ರಮದ ಆತ್ಮವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು