6:44 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಪಲ್ಗುಣಿ ಒಕ್ಕೂಟದ ವಾಟ್ಸಪ್ ಗ್ರೂಪಿನ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಕಲ್ಲಂಗಡಿ ಹಣ್ಣು, ದ್ರಾಕ್ಷಿ ಮತ್ತು ಮಜ್ಜಿಗೆ ವಿತರಣೆ

25/02/2025, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಹಾಶಿವರಾತ್ರಿ ಅಂಗವಾಗಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ಹೊರ ಜಿಲ್ಲೆಗಳಿಂದ ಬರುವ ಭಕ್ತಾದಿಗಳಿಗೆ ಮಲೆನಾಡು ಪ್ರದೇಶದಲ್ಲಿ ವಿಶಿಷ್ಟ ಭಕ್ತಿಯ ಸ್ಮರಣೆ ಮೂಡಿಸಿತು. ದೈವ ಮಾನವ ಎಂದೇ ಹೆಸರುವಾಸಿಯಾಗಿದ್ದ ದಿ. ಮಹೇಂದ್ರ ಕುಮಾರ್ ಪಲ್ಗುಣಿ ಅವರ ಸವಿನೆನಪಿನಲ್ಲಿ ಪಲ್ಗುಣಿ ಒಕ್ಕೂಟದ ವಾಟ್ಸಪ್ ಗ್ರೂಪಿನ ಅಭಿಮಾನಿಗಳು ಭಕ್ತಾದಿಗಳಿಗೆ ಕಲ್ಲಂಗಡಿ ಹಣ್ಣು, ದ್ರಾಕ್ಷಿ ಹಣ್ಣು ಮತ್ತು ಮಜ್ಜಿಗೆ ಹಂಚುವ ಮೂಲಕ ಅವರ ಭಕ್ತಿಯ ನಮನವನ್ನು ಸಲ್ಲಿಸಿದರು.


ಈ ಪುಣ್ಯ ಕಾರ್ಯದಲ್ಲಿ ಚಿತ್ರರಂಗದ ಖ್ಯಾತ ನಿರ್ದೇಶಕರಾದ ಮರಡಿಹಳ್ಳಿ ನಾಗಚಂದ್ರ ಸೇರಿದಂತೆ ಹಲವರು ಭಾಗವಹಿಸಿದರು. ಅವರ ಜೊತೆ ನಟ ತರುಣ್ ಶಿಶೀರ್, ಛಾಯಾಗ್ರಾಹಕರು ಪಿಕೆ ಹೆಚ್ ದಾಸ್, ರವಿಕುಮಾರ್ ಬೆಂಗಳೂರು, ರಾಕೇಶ್ ರೇವಣ್ಣ, ರಿಜ್ವಾನ್, ಪ್ರವೀಣ್ ಪೂಜಾರಿ, ನಿರಂಜನ್ ಜಿಂದಾಲ್, ಮತ್ತು ಪ್ರಕರ್ತಾ ಸಂತೋಷ್ ಅತ್ತಿಗೆರೆ ಹಾಜರಿದ್ದರು.
ಮರಡಿಹಳ್ಳಿ ನಾಗಚಂದ್ರ ಅವರ ಗುರು ಭಕ್ತಿ ಮತ್ತು ಬದುಕಿನ ಮೇಲೆ ಅವರ ಪ್ರಭಾವದ ಕಥೆ ವಿಶೇಷವಾಗಿದೆ. ಅವರು ಗುರುಗಳೊಂದಿಗೆ 25 ವರ್ಷಗಳ ಪರಿಚಯವನ್ನು ಹೊಂದಿದ್ದು, ಅವರ ಸಲಹೆ ಮತ್ತು ಮಾರ್ಗದರ್ಶನದಿಂದ “ನಾಗಚಂದ್ರ” ಎಂಬ ಹೆಸರನ್ನು ಬದಲಾಯಿಸಿ “ಮರಡಿಹಳ್ಳಿ ನಾಗಚಂದ್ರ” ಎಂಬ ಹೊಸ ಗುರುತನ್ನು ಗಳಿಸಿದರು. ಗುರುಗಳ ಸ್ಪೂರ್ತಿಯಿಂದ ಅವರ ಬದುಕಿಗೆ ದಾರಿ ದೀಪ ಸಿಕ್ಕಿತು. ಚಿತ್ರರಂಗದಲ್ಲಿ ಗುರುಗಳ ನಂಟು ಅಪಾರವಾಗಿದ್ದು, ಅವರಿಂದ ಪಡೆದ ಸ್ಫೂರ್ತಿಯಿಂದ नागಚಂದ್ರ ಅವರ ಚಿತ್ರಜೀವನ ಗಾಢವಾಗಿದೆ.

ಈ ಪ್ರಸಂಗವು ಗುರು-ಶಿಷ್ಯರ ಅಜರಾಮರ ಸಂಬಂಧವನ್ನು ಸ್ಮರಿಸಿತು. “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ಸಂದೇಶವು ಈ ಕಾರ್ಯಕ್ರಮದ ಆತ್ಮವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು