3:47 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕನವರ 67ನೇ ಜನ್ಮದಿನಾಚರಣೆ: ಕಟೌಟ್ ಗೆ ಹಾಲಿನ ಅಭಿಷೇಕ

24/11/2024, 16:21

ಶಿವು ರಾಠೋಡ್ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಪೇಠಾಮ್ಮಾಪುರ ಗ್ರಾಮದಲ್ಲಿ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕ ಅವರ 67ನೇ ಜನ್ಮದಿನದ ಪ್ರಯುಕ್ತ ಪೇಠಾಮಪುರ ಗ್ರಾಮದಲ್ಲಿ ದಿವಂಗತ ಶಾಸಕರು ವೆಂಕಟಪ್ಪ ನಾಯಕನವರ ನಾಮಫಲಕ ಉದ್ಘಾಟನೆ ಹಾಗೂ ಬೃಹತ್ ಗಾತ್ರದ ಕಟೌಟ್ ನಿರ್ಮಾಣ ಮಾಡಿ ಹಾಲಿನ ಅಭಿಷೇಕ ಪುಷ್ಪಾಭಿಷೇಕ ಮಾಡಿ ಕೇಕ್ ಕತ್ತರಿಸಿ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪೇಠಾಮಪುರ ಗ್ರಾಮವು ದಿವಂಗತ ಶಾಸಕ ರಾಜ ವೆಂಕಟಪ್ಪರವರಿಗೆ ತವರು ಮನೆ ಇದ್ದ ಹಾಗಿತ್ತು. ಹಾಗಾಗಿ ಬಹಳ ವಿಜೃಂಭಣೆಯಿಂದ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕನವರ ಆತ್ಮೀಯರಾದ ಸಹೋದರ ಸ್ವರೂಪರಾದ ವಿಠಲ್ ಯಾದವ್ ಅವರ ಮಗನಾದ ಮಹೇಶ್ ವಿ. ಯಾದವ್ ಅವರ ಅಭಿಮಾನಿ ಬಳಗದ ವತಿಯಿಂದ ಸತತ ಮೂರು ದಿನಗಳ ಈ ಕಾರ್ಯಕ್ರಮಕ್ಕೆ ತಯಾರಿ ಮಾಡಲಾಗಿದೆ. ತಾಲೂಕಿನದ್ಯಂತ ದಿವಂಗತ ಶಾಸಕ ರಾಜ ವೆಂಕಟಪ್ಪ ನಾಯಕರವರ ಅಭಿಮಾನಿ ಬಳಗ ಹರಿದು ಬಂದಿತ್ತು. 37 ವರ್ಷಗಳಿಂದದಿವಂಗತ ಶಾಸಕ ರಾಜ ವೆಂಕಟಪ್ಪ ಅವರಿಗೆ ಸ್ನೇಹಿತರಾಗಿ ವಿಠಲ್ ಯಾದವ್ ಬೆನ್ನೆಲುಬಾಗಿ ಯಾವ ಸ್ಥಿತಿಯಲ್ಲೂ ಧೃತಿಗೆಡದೆ ಅವರೊಂದಿಗೆ ಸದಾ ಜೊತೆಗೆ ಇರುತ್ತಿದ್ದರು. ವಿಠಲ್ ಯಾದವ್ ಅಗಲಿದ್ದ ನಮ್ಮ ನಾಯಕನನ್ನ ನೆನೆದು ಭಾವುಕರಾಗಿ ರಾಜ ವೆಂಕಟಪ್ಪ ನಾಯಕನ ಅವರ ಒಡನಾಟದ ಬಗ್ಗೆ ಕುರಿತು ಸವಿಸ್ತಾರವಾಗಿ ವಿವರಣೆ ನೀಡಿದರು. ಅವರ ಅಗಲಿಕೆ ನಮ್ಮನ್ನು ಕೊರಗುತ್ತಿದೆ. ಆದರೂ ನಮ್ಮ ಜನ ಅವರ ಕುಟುಂಬವನ್ನು ಎತ್ತಿ ಹಿಡಿದಿದೆ. ಅವರ ಮಗನಾದ ಸುರಪುರು ಶಾಸಕ ರಾಜ ವೇಣುಗೋಪಾಲ್ ನಾಯಕ್ ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಿ ತಮ್ಮ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ರೀತಿ ಸದಾ ಅವರ ಕುಟುಂಬಕ್ಕೆ ಬೆನ್ನೆಲುಬಾಗಿ ತಮ್ಮ ಸೇವೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದು ಬಾವುಕರಾಗಿ ನುಡಿದರು.
ಕಾರ್ಯಕ್ರಮದಲ್ಲಿ ವಿಠಲ್ ಯಾದವ್ , ಮಹೇಶ್ ವಿ. ಯಾದವ್, ಕೃಷ್ಣನ ಜಾದವ್, ಹುಣಸಗಿ ಗ್ಯಾರಂಟಿ ಅಧ್ಯಕ್ಷರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ದಿವಂಗತ ಶಾಸಕರು ರಾಜ ವೆಂಕಟಪ್ಪ ನಾಯಕ ಅಭಿಮಾನಿ ಬಳಗ ಮುಖಂಡರುಗಳು ಕಾರ್ಯಕರ್ತರು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು