9:07 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಜ. 7ರಂದು “ದೈವಜ್ಞ ದರ್ಶನ”: ಉಭಯ ಶ್ರೀಗಳ ಪೂರ್ಣಕುಂಭ ಸ್ವಾಗತ ಮೆರವಣಿಗೆ

06/01/2026, 23:04

ಮಂಗಳೂರು(reporterkarnataka.com): ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ. ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿಗಳವರ ಹಾಗೂ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರ ದೈವಜ್ಞ ದರ್ಶನ ಕಾರ್ಯಕ್ರಮ ಜನವರಿ 7ರಂದು ಸಂಜೆ 6.00 ಗಂಟೆಗೆ ನಗರದ ಅಶೋಕನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನೆರವೇರಲಿದೆ.
ದೈವಜ್ಞ ಬ್ರಾಹ್ಮಣ ಸಮಾಜದ ಸರ್ವಾಂಗೀಣ ವಿಕಾಸ, ಸಮಾಜ ಸಂಘಟನೆ ಹಾಗೂ ಧಾರ್ಮಿಕ ಭಾವನೆಗಳ ಸಂವರ್ಧನೆಗಾಗಿ ನಾಲ್ಕು ದಶಕಗಳ ಹಿಂದೆ ಸ್ಥಾಪಿಸಲಾದ ದೈವಜ್ಞ ಶ್ರೀ ಮಠವು ತನ್ನ ಕಾರ್ಯ ವ್ಯಾಪ್ತಿಯಲ್ಲಿ ಕರ್ತವ್ಯಗಳನ್ನು ಪೂರೈಸುತ್ತಾ ಮುಂದುವರೆಯುತ್ತಿದ್ದು, ಇದೀಗ ದೇವರನ್ನು ತಿಳಿದು ದೈವಯಜ್ಞ ಮುಂತಾದವುಗಳನ್ನು ಆಚರಿಸುತ್ತಾ ದೈವಜ್ಞರೆಂದು ಖ್ಯಾತರಾದ ಸಮಾಜ ಬಾಂಧವರನ್ನು ಸಂದರ್ಶಿಸಲು ಹಾಗೂ ತಮ್ಮ ಉತ್ತರಾಧಿಕಾರಿಯಾದ ಶ್ರೀಗಳವರನ್ನು ಪರಿಚಯಿಸಲು ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು ತತ್ ಕರಕಮಲ ಸಂಜಾತರಾದ ಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳವರೊಂದಿಗೆ “ದೈವಜ್ಞ ದರ್ಶನ” ಎಂಬ ಕಾರ್ಯ ನಿಮಿತ್ತ ಮಂಗಳೂರಿಗೆ ಚಿತ್ತೈಸಲಿರುವರು.
*ಸಂಜೆ 5.00 ಗಂಟೆಗೆ ಶ್ರೀ ಶ್ರೀಗಳವರ ಆಗಮನ:* ಪೂರ್ಣಕುಂಭ ಸ್ವಾಗತ ಉಭಯ ಶ್ರೀಗಳು ಮಣ್ಣಗುಡ್ಡೆ ಗುರ್ಜಿ ಬಳಿಯಿಂದ ಸಂಜೆ 5.30ಕ್ಕೆ ಪೂರ್ಣಕುಂಭ ಸ್ವಾಗತ – ಮೆರವಣಿಗೆ ಮೂಲಕ ದೈವಜ್ಞ ಕಲ್ಯಾಣ ಮಂಟಪಕ್ಕೆ ಅಗಮಿಸಲಿರುವರು. ದೈವಜ್ಞ ಮಹಿಳಾ ಮಂಡಳಿಯವರಿಂದ ಚೆಂಡೆ ಹಾಗೂ ಭಜನೆ ಕುಣಿತ ಹಾಗೂ ಟ್ಯಾಬ್ಲೋ, ಮಂಗಳವಾದ್ಯದೊಂದಿಗೆ ಮೆರವಣಿಗೆ ಮೂಲಕ ದೈವಜ್ಞ ಕಲ್ಯಾಣ ಮಂಟಪಕ್ಕೆ ಆಗಮಿಸಿ ಗೌರವ ಸನ್ಮಾನ ಸ್ವೀಕರಿಸಿ, ಬಳಿಕ ಸಂಜೆ 6:30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಅಶೀರ್ವಚನ ನೀಡಲಿರುವರು. ಇದೇ ವೇಳೆ ಗುರುವಂದನೆ. ಶ್ರೀ ಶ್ರೀಗಳವರಿಗೆ ಫಲಪುಷ್ಪ ಸಮರ್ಪಣೆ. ದಾನಿಗಳಿಗೆ ಗೌರವಾರ್ಪಣೆ ಹಾಗೂ ಶ್ರೀಗಳವರಿಗೆ ಸಮಾಜದ ವತಿಯಿಂದ ಪಾದೂಕಾ ಪೂಜೆ ನೆರವೇರಲಿದೆ ಎಂದು ದೈವಜ್ಞ ಬ್ರಾಹ್ಮಣರ ಸಂಘದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು