4:25 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ; ಪೊಲೀಸರಿಂದ 4 ಬಸ್ ಗಳಿಗೆ ದಂಡ

28/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೆ ಹೆಚ್ಚು ಪ್ರವಾಸಿ ಬಸುಗಳು ಕುಟ್ಟ ಗೇಟ್ ಮೂಲಕ, ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ ಕುಶಾಲನಗರ ಮೈಸೂರು ಜಿಲ್ಲೆಗೆ ಪ್ರವಾಸಕ್ಕೆ ತೆರಳುತ್ತಾರೆ.
ಈ ಬಸುಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿದ್ದು, ಹೆಚ್ಚಿನ ಶಬ್ದ ದೊಂದಿಗೆ ಕರ್ಕಶ ಸಂಗೀತದೊಂದಿಗೆ ಶಬ್ದ ಮಾಲಿನ್ಯ ಆಗುತ್ತಿರುವ ಬಗ್ಗೆ ಸಾರ್ವಜನಿಕರು ಒಬ್ಬರು ಇಂದು ಸಂಜೆ ವಿರಾಜಪೇಟೆ ಡಿ ವೈ ಎಸ್ ಪಿ ಅವರ ಗಮನಕ್ಕೆ ತಂದಾಗ, ಕೂಡಲೆ ಅವರು ಕಾರ್ಯಪ್ರವೃತ್ತರಾಗಿ, ಕುಟ್ಟ ಪೊಲೀಸ್ ಠಾಣೆಯಲ್ಲಿ ಈ ಪ್ರವಾಸಿ ಬಸುಗಳ ಮೇಲೆ ದಂಡ ವಿಧಿಸಿ ಸೂಕ್ತ ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ.


ಕೇರಳ ರಾಜ್ಯದಲ್ಲಿ ಧ್ವನಿವರ್ಧಕ ಹಾಗೂ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಬಸುಗಳಲ್ಲಿ ಅಳವಡಿಸಲು , ಹಾಗೆ ಬಣ್ಣ ಬಣ್ಣದ ಚಿತ್ರದಿಂದ ಅಲಂಕಾರ ಗೊಳಿಸುವುದನ್ನು ನಿಷೇಧಿಸಲಾಗಿದೆ. ಆದರೆ ಕೇರಳದ ಗಡಿ ದಾಟಿದ ತಕ್ಷಣ ಈ ಪ್ರವಾಸಿ ಬಸುಗಳಲ್ಲಿ ಧ್ವನಿವರ್ಧಕಗಳು ಮೊಳುಗುತ್ತವೆ, ಸಂಜೆಯಾಗುತ್ತಿದ್ದಂತೆ ಬಸ್ಸಿನಲ್ಲಿ ಬಣ್ಣ ಬಣ್ಣದ ದೀಪಗಳು ಹಾಕಿಕೊಂಡು ಹೆಚ್ಚಿನ ಶಬ್ದದ ಸಂಗೀತದೊಂದಿಗೆ ಕೊಡಗಿನ ಮೂಲಕ ಸಂಚರಿಸುತ್ತದೆ ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದ್ದು ಈ ಬಗೆ, ಹಲವು ಬಾರಿ ಈ ಬಸುಗಳು ಹಾದು ಹೋಗುವ ಪೊಲೀಸ್ ಠಾಣೆಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದಿದ್ದಾಗ, ಆರ್. ಟಿ.ಓ.ಕಚೇರಿಯ ಇನ್ಸ್ಪೆಕ್ಟರ್ ಗೆ ಕೂಡ ಸಾರ್ವಜನಿಕರು ಮೌಕಿಕವಾಗಿ ಮಾಹಿತಿ ನೀಡಿದರು ಯಾವುದೇ ಕ್ರಮ ಕೈಗೊಳದಿರುವಾಗ, ಇಂದು ನೇರವಾಗಿ ಡಿ ವೈ.ಎಸ್. ಪಿ ಮಹೇಶ್ ಕುಮಾರ್ ರವರ ಗಮನಕ್ಕೆ ತಂದಾಗ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರು ಡಿ. ವೈ ಎಸ್. ಪಿ ಅವರ ಕಾರ್ಯಕ್ಷಮತೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು