11:06 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕೇರಳ ಪ್ರವಾಸಿ ಬಸ್ ಗಳಲ್ಲಿ ಡಿಜೆ ಅಳವಡಿಕೆ: ಶಬ್ದ ಮಾಲಿನ್ಯದ ವಿರುದ್ಧ ಆಕ್ಷೇಪ; ಪೊಲೀಸರಿಂದ 4 ಬಸ್ ಗಳಿಗೆ ದಂಡ

28/10/2025, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೆ ಹೆಚ್ಚು ಪ್ರವಾಸಿ ಬಸುಗಳು ಕುಟ್ಟ ಗೇಟ್ ಮೂಲಕ, ಪೊನ್ನಂಪೇಟೆ ಗೋಣಿಕೊಪ್ಪ ತಿತಿಮತಿ ಪಟ್ಟಣಕ್ಕಾಗಿ ಕುಶಾಲನಗರ ಮೈಸೂರು ಜಿಲ್ಲೆಗೆ ಪ್ರವಾಸಕ್ಕೆ ತೆರಳುತ್ತಾರೆ.
ಈ ಬಸುಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿದ್ದು, ಹೆಚ್ಚಿನ ಶಬ್ದ ದೊಂದಿಗೆ ಕರ್ಕಶ ಸಂಗೀತದೊಂದಿಗೆ ಶಬ್ದ ಮಾಲಿನ್ಯ ಆಗುತ್ತಿರುವ ಬಗ್ಗೆ ಸಾರ್ವಜನಿಕರು ಒಬ್ಬರು ಇಂದು ಸಂಜೆ ವಿರಾಜಪೇಟೆ ಡಿ ವೈ ಎಸ್ ಪಿ ಅವರ ಗಮನಕ್ಕೆ ತಂದಾಗ, ಕೂಡಲೆ ಅವರು ಕಾರ್ಯಪ್ರವೃತ್ತರಾಗಿ, ಕುಟ್ಟ ಪೊಲೀಸ್ ಠಾಣೆಯಲ್ಲಿ ಈ ಪ್ರವಾಸಿ ಬಸುಗಳ ಮೇಲೆ ದಂಡ ವಿಧಿಸಿ ಸೂಕ್ತ ಎಚ್ಚರಿಕೆ ನೀಡಿ ಕಳುಹಿಸಿಕೊಡಲಾಗಿದೆ.


ಕೇರಳ ರಾಜ್ಯದಲ್ಲಿ ಧ್ವನಿವರ್ಧಕ ಹಾಗೂ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಬಸುಗಳಲ್ಲಿ ಅಳವಡಿಸಲು , ಹಾಗೆ ಬಣ್ಣ ಬಣ್ಣದ ಚಿತ್ರದಿಂದ ಅಲಂಕಾರ ಗೊಳಿಸುವುದನ್ನು ನಿಷೇಧಿಸಲಾಗಿದೆ. ಆದರೆ ಕೇರಳದ ಗಡಿ ದಾಟಿದ ತಕ್ಷಣ ಈ ಪ್ರವಾಸಿ ಬಸುಗಳಲ್ಲಿ ಧ್ವನಿವರ್ಧಕಗಳು ಮೊಳುಗುತ್ತವೆ, ಸಂಜೆಯಾಗುತ್ತಿದ್ದಂತೆ ಬಸ್ಸಿನಲ್ಲಿ ಬಣ್ಣ ಬಣ್ಣದ ದೀಪಗಳು ಹಾಕಿಕೊಂಡು ಹೆಚ್ಚಿನ ಶಬ್ದದ ಸಂಗೀತದೊಂದಿಗೆ ಕೊಡಗಿನ ಮೂಲಕ ಸಂಚರಿಸುತ್ತದೆ ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದ್ದು ಈ ಬಗೆ, ಹಲವು ಬಾರಿ ಈ ಬಸುಗಳು ಹಾದು ಹೋಗುವ ಪೊಲೀಸ್ ಠಾಣೆಗೆ ಮೌಖಿಕವಾಗಿ ಹಲವರು ದೂರು ನೀಡಿದ್ದರೂ ಕೂಡ ಯಾವುದೇ ಕ್ರಮ ಕೈಗೊಳ್ಳದಿದ್ದಾಗ, ಆರ್. ಟಿ.ಓ.ಕಚೇರಿಯ ಇನ್ಸ್ಪೆಕ್ಟರ್ ಗೆ ಕೂಡ ಸಾರ್ವಜನಿಕರು ಮೌಕಿಕವಾಗಿ ಮಾಹಿತಿ ನೀಡಿದರು ಯಾವುದೇ ಕ್ರಮ ಕೈಗೊಳದಿರುವಾಗ, ಇಂದು ನೇರವಾಗಿ ಡಿ ವೈ.ಎಸ್. ಪಿ ಮಹೇಶ್ ಕುಮಾರ್ ರವರ ಗಮನಕ್ಕೆ ತಂದಾಗ ಸೂಕ್ತ ಕಾನೂನು ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರು ಡಿ. ವೈ ಎಸ್. ಪಿ ಅವರ ಕಾರ್ಯಕ್ಷಮತೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು