1:45 AM Saturday6 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5… ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ Mysore | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ: ಸಾಹಿತಿ ಬಾನು ಮಸ್ತಾಕ್… ಜಿಎಸ್ ಟಿ ಸರಳೀಕರಣ ಗ್ರಾಹಕ ಸ್ನೇಹಿ ತೀರ್ಮಾನ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮುಳ್ಳಯ್ಯನಗಿರಿ, ದತ್ತಪೀಠ ಮಾರ್ಗದಲ್ಲಿ ರಸ್ತೆ ಕುಸಿತದ ಭೀತಿ: ಸೆ. 14ವರೆಗೆ ಪ್ರವಾಸ ಮುಂದೂಡುವಂತೆ… ದಾವಣಗೆರೆಯಲ್ಲಿ ಎಸ್‌ಎಸ್ ಕೇರ್ ಟ್ರಸ್ಟ್ ವಿದ್ಯಾರ್ಥಿ ವಿಭಾಗದ “ಆರಂಭ”ಕ್ಕೆ ಚಾಲನೆ

ಇತ್ತೀಚಿನ ಸುದ್ದಿ

DK | ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್‌ಐಟಿ ತಂಡ ಇಂದು ಮಂಗಳೂರಿಗೆ? ತನಿಖಾ ಪ್ರಕ್ರಿಯೆ ಆರಂಭ ಸಾಧ್ಯತೆ

23/07/2025, 13:20

ಮಂಗಳೂರು(reporterkarnataka.com): ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಸಮಾಧಿಗಳು, ನಾಪತ್ತೆಗಳು ಮತ್ತು ಮಹಿಳೆಯರು ಮತ್ತು ವಿದ್ಯಾರ್ಥಿಗಳ ಮೇಲಿನ ಅಪರಾಧಗಳ ತನಿಖೆಗಾಗಿ ರಾಜ್ಯ ಸರಕಾರ ನೇಮಿಸಿದ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಮಂಗಳೂರಿಗೆ ಆಗಮಿಸಲಿದ್ದು, ತನಿಖೆ ಆರಂಭಿಸಲಿದೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ.
ಎಸ್ ಐಟಿ ತಂಡದ ಮುಖ್ಯಸ್ಥರು ಇಂದು ಸಂಜೆ ದ.ಕ‌. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿಯಾಗಿ ಚರ್ಚಿಸುವ ನಿರೀಕ್ಷೆ ಇದೆ. ಅದೇ ರೀತಿ ಎಸ್ ಐಟಿ ತಂಡ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಯಾವುದೇ ಕ್ಷಣದಲ್ಲಿ ಆಗಮಿಸುವ ಸಾಧ್ಯತೆಗಳಿವೆ.
ಈ ಮಧ್ಯೆ ರಾಜ್ಯ ಸರಕಾರ ಎಸ್ ಐಟಿ ತಂಡಕ್ಕೆ ಉನ್ನತ ಅಧಿಕಾರಿಗಳನ್ನೊಳಗೊಂಡ 20 ಮಂದಿ ಪೊಲೀಸರನ್ನು ಸೇರ್ಪಡೆಗೊಳಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.
ಹೊಸತಾಗಿ ಸೇರ್ಪಡೆಗೊಂಡ ಪೊಲೀಸರಲ್ಲಿ ಓರ್ವ ಎಸ್ ಪಿ, ಇಬ್ಬರು ಡಿಎಸ್ಪಿ, ನಾಲ್ವರು ಇನ್ಸ್ ಪೆಕ್ಟರ್, 7 ಮಂದಿ ಸಬ್ ಇನ್ಸ್ ಪೆಕ್ಟರ್, ಸಿಪಿಐ, ಎಎಸ್ ಐ ಇದ್ದಾರೆ. ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸೇರಿಸಲಾಗಿದೆ.
ಎಸ್ ಐಟಿ ತಂಡ ಇಂದಿನಿಂದಲೇ ತನಿಖಾ ಪ್ರಕ್ರಿಯೆ ಆರಂಭಿಸುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಕಡತಗಳನ್ನು ಹಸ್ತಾಂತರಿಸುವುದಕ್ಕಾಗಿ ಬೆಳ್ತಂಗಡಿ ಮತ್ತು ಧರ್ಮಸ್ಥಳ ಠಾಣೆಯಲ್ಲಿ ಸಿದ್ದತೆಗಳು ನಡೆಯುತ್ತಿದೆ.
ಸಾರ್ವಜನಿಕರ ಹಾಗೂ ಪ್ರಗತಿಪರ ಸಂಘಟನೆಗಳ ತೀವ್ರ ಒತ್ತಡದ ಹಿನ್ನೆಲೆಯಲ್ಲಿ
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾದ ಅಪರಾಧದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿ ಸರಕಾರ ಶನಿವಾರ ಆದೇಶ ಹೊರಡಿಸಿತ್ರು.
ಕಳೆದ 20 ವರ್ಷಗಳಿಂದ ಧರ್ಮಸ್ಥಳದಲ್ಲಿ ನಡೆದ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆ ಪ್ರಕರಣಗಳು, ಅಸಹಜ ಸಾವಿನ ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು