5:01 PM Sunday12 - April 2026
ಬ್ರೇಕಿಂಗ್ ನ್ಯೂಸ್
ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: 8 ಕ್ಷೇತ್ರ; ಅಂತಿಮ ಕಣದಲ್ಲಿ ಒಟ್ಟು 60 ಅಭ್ಯರ್ಥಿಗಳು; ಕಾಂಗ್ರೆಸ್, ಬಿಜೆಪಿ, ಎಎಪಿ ಎಲ್ಲ ಕಡೆ ಸ್ಪರ್ಧೆ

24/04/2023, 22:38

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂತೆಗೆತ ಪೂರ್ಣಗೊಂಡಿದ್ದು, ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿ ಗಳಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲ 8 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜನತಾ ದಳ ಮಂಗಳೂರು ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆ ಸ್ಪರ್ಧಿಸುತ್ತಿದೆ. 10 ಮಂದಿ ಪಕ್ಷೇತರರು ಅಖಾಡದಲ್ಲಿದ್ದಾರೆ. ಆರ್ ಯುಪಿಪಿ 19 ಮಂದಿ ಸ್ಪರ್ದಿಸುತ್ತಿದ್ದಾರೆ. ವರ್ಷಪೂರ್ತಿ ಬೀದಿಯಲ್ಲಿ ಜನಪರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಿರುವ ಎಡಪಕ್ಷಗಳು ಒಂದೇ ಒಂದು ಅಭ್ಯರ್ಥಿಯನ್ನು ಚುನಾವಣಾ ರಣರಂಗಕ್ಕೆ ಇಳಿಸದಿರುವುದು ವಿಶೇಷವಾದರೆ, ಜಿಲ್ಲೆಯಲ್ಲಿ
ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ಆಮ್ ಆದ್ಮಿ ಪಾರ್ಟಿ ಎಲ್ಲ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ವಿಶೇಷವಾಗಿದೆ.
ಅಂತಿಮ ಕಣದಲ್ಲಿರುವ ಒಟ್ಟು 60 ಮಂದಿ ಅಭ್ಯರ್ಥಿಗಳ ಪೈಕಿ 52 ಮಂದಿ ಪುರುಷರು ಹಾಗೂ 8 ಮಂದಿ ಮಹಿಳೆಯರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು