5:36 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ 2013ರ ಫಲಿತಾಂಶ ಮರುಕಳಿಸಲಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭವಿಷ್ಯ

26/04/2023, 21:31

ಮಂಗಳೂರು(reporterkarnataka.com): ರಾಜ್ಯದಲ್ಲಿ ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತ ಪಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ 8 ಸ್ಥಾನಗಳ ಗೆಲುವಿನ ಜತೆಗೆ 2013ರ ಫಲಿತಾಂಶ ಮರುಕಳಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ಪರ ಅಲೆ ಇದೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 8 ಸ್ಥಾನಗಳ ಪೈಕಿ 7 ಸ್ಥಾನಗಳಲ್ಲಿ ಜಯಗಳಿಸಿತ್ತು. ಈ ಬಾರಿ ಚುನಾವಣೆಯಲ್ಲಿ ಈ ಫಲಿತಾಂಶ ಮರಕಳಿಸುವುದರೊಂದಿಗೆ 8ರಲ್ಲಿ 8 ಸ್ಧಾನಗಳನ್ನು ಗೆದ್ದುಕೊಳ್ಳಲಿದೆ ಎಂದವರು ಹೇಳಿದರು.


ಕಾಂಗ್ರೆಸ್‌ಗೆ ಸ್ಪಷ್ಟ ಜನಾದೇಶ ದೊರೆಯಲಿದೆ. ಪಕ್ಷಕ್ಕೆ ರಾಜ್ಯದಲ್ಲಿ ವ್ಯಕ್ತವಾಗುತ್ತಿರುವ ಭಾರಿ ಜನಸ್ಪಂದನೆಯಿಂದ ಬಿಜೆಪಿ ಹತಾಶಗೊಂಡಿದೆ. ಅವರಲ್ಲಿ ಹೇಳಿಕೊಳ್ಳುವಂತ ಯಾವುದೇ ಸಾಧನೆ ಕಾರ್ಯಕ್ರಮಗಳಿಲ್ಲ. ಶೇ.40 ಕಮಿಷನ್ ಸರಕಾರ ಎಂಬುದು ಅವರಿಗೆ ಬ್ರಾಂಡ್ ಆಗಿದೆ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದ ಬಿಜೆಪಿಯ ಸಾಧನೆ ಎಂದರೆ ಭ್ರಷ್ಟಚಾರ ಮತ್ತು ಜನವಿರೋಧಿ ಆಡಳಿತ ಎಂದವರು ಹೇಳಿದರು.
ಕಾಂಗ್ರೆಸ್‌ನ ಹಿಂದಿನ ಸಿದ್ದರಾಮಯ್ಯ ಸರಕಾರ ನೀಡಿದ್ದ ಭರವಸೆಗಳಲ್ಲಿ ಶೇ.90ರಷ್ಟನ್ನು ಈಡೇರಿಸಿತ್ತು. ಆದರೆ ಬಿಜೆಪಿ ನೀಡಿದ್ದ ಭರವಸೆಗಳಲ್ಲಿ ಕೇವಲ ಶೇ25 ಮಾತ್ರ ಈಡೇರಿಸಿದೆ. ಕಾಂಗ್ರೆಸ್ ಈ ಬಾರಿ ಆಡಳಿತಕ್ಕೆ ಬರಲಿದೆ ಮತ್ತು ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ. ಪಕ್ಷ ನೀಡಿರುವ 4 ಗ್ಯಾರಂಟಿಗಳನ್ನು ಅಧಿಕಾರ ಬಂದ ಪ್ರಥಮ ಸಚಿವ ಸಂಪುಟ ಸಭೆಯಲ್ಲೇ ಅನುಮೋದಿಸಿ ಜಾರಿಗೊಳಿಸಲಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಪದ್ಮರಾಜ್,ಶುಭೋದಯ ಆಳ್ವ, ನೀರಜ್‌ಪಾಲ್, ನಜೀರ್ ಬಜಾಲ್, ಸವಾದ್, ಆರಿಫ್, ಅಲ್ತಾಫ್ ಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು