4:59 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ದ.ಕ. ಲೋಕಸಭೆ ಕ್ಷೇತ್ರದಲ್ಲಿ ಬಹುತೇಕ ಶಾಂತಿಯುತ ಎಲೆಕ್ಷನ್ : ಶೇ. 71.83 ಮತದಾನ

26/04/2024, 22:27

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಕರಾವಳಿಯ ದ.ಕ. ಲೋಕಸಭೆ ಕ್ಷೇತ್ರ ಸೇರಿದಂತೆ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮೊದಲ ಹಂತದ ಮತದಾನ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ದ.ಕ.ದಲ್ಲಿ ಶೇ. 71.83ರಷ್ಟು ಮತದಾನವಾಗಿದೆ. ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಡಿ ಮಸ್ಟರಿಂಗ್ ಪ್ರಕ್ರಿಯೆ ನಡೆಯುತ್ತಿದೆ.
ಇಂದು ಬೆಳಗ್ಗೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರ ವರೆಗೆ ಮತದಾನ ನಡೆದಿದೆ. ನಗರದ ಪಂಪ್ ವೆಲ್ ಬಳಿಯ ಕಪಿತಾನಿಯೊ ಮತಗಟ್ಟೆ ಸಮೀಪ ಬಿಜೆಪಿ ಕಾರ್ಯಕರ್ತರು ಎನ್ನಲಾದ ಕೆಲವರು ಗದ್ದಲ ನಿರ್ಮಿಸಿರುವುದನ್ನು ಬಿಟ್ಟರೆ ಶಾಂತಿಯುತ ಮತದಾನ ನಡೆದಿದೆ. ಇದೀಗ ಜಿಲ್ಲೆಯ ಎಲ್ಲ 1876 ಮತಗಟ್ಟೆಗಳಿಂದ ಚುನಾವಣಾ ಸಿಬ್ಬಂದಿಗಳು ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಜತೆ ನಗರದ ಉರ್ವ ಕೆನರಾ ಹೈಸ್ಕೂಲಿನ ಡಿ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ್ದಾರೆ. ಇಲ್ಲಿಂದ ಸುರತ್ಕಲ್ ನ ಎನ್ ಐಟಿಕೆ ಸ್ಟ್ರಾಂಗ್ ಕೊಠಡಿಗೆ ಇವಿಎಂಗಳನ್ನು ಸಾಗಿಸಲಾಗುವುದು.
ಜಿಲ್ಲೆಯಾದ್ಯಂತ 1876 ಮತಗಟ್ಟೆಗಳಿದ್ದು, ಒಟ್ಟು11, 255 ಮಂದಿ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು.

ಇದರಲ್ಲಿ ಅಧಿಕಾರಿಗಳು ಕೂಡ ಸೇರಿದ್ದಾರೆ. 2251 ಮಂದಿ ಪ್ರಿಸೈಡಿಂಗ್ ಅಧಿಕಾರಿಗಳನ್ನು ನೇಮಿಸಲಾಗಿದೆ.
ಇಂದು ಬೆಳಗ್ಗೆಯೇ ನಗರದ ಉರ್ವ ಕೆನರಾ ಹೈಸ್ಕೂಲಿನಲ್ಲಿ ಚುನಾವಣಾ ಸಿಬ್ಬಂದಿಗಳಿಗೆ ಕೊನೆಯ ಹಂತದ ಸಿದ್ದತೆಗಳನ್ನು ನಡೆಸಲಾಯಿತು. ಜಿಲ್ಲಾದ್ಯಂತವಿರುವ 1876 ಮತಗಟ್ಟೆಗಳಿಗೆ ಇವಿಎಂ ಮೆಷಿನೊಂದಿಗೆ ಸಿಬ್ಬಂದಿಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾದ ವಾಹನದಲ್ಲಿ ಭದ್ರತೆಯೊಂದಿಗೆ ಕಳುಹಿಸಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು