10:41 PM Friday10 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಶೇ. 12ಕ್ಕಿಂತ ಹೆಚ್ಚು ಆಲ್ಕೋಹಾಲ್ ಹೊಂದಿರುವ ಔಷಧಿಗಳಿಗೆ ವೈದ್ಯರ `ಪ್ರಿಸ್ಕ್ರಿಪ್ಷನ್’ ಕಡ್ಡಾಯ: ಕೇಂದ್ರ ಸರಜಾರದ ಮಹತ್ವದ ಆದೇಶ

10/07/2026, 22:20

ನವದೆಹಲಿ(reporterkarnataka.com): ನೀವು ಕೆಮ್ಮಿನ ಸಿರಪ್ ಅಥವಾ ಯಾವುದೇ ಟಾನಿಕ್‌ಗಳನ್ನು ಮೆಡಿಕಲ್ ಶಾಪ್‌ಗೆ ಹೋಗಿ ಸುಮ್ಮನೆ ಕೇಳಿ ಖರೀದಿಸುವ ದಿನಗಳು ಇನ್ಮುಂದೆ ಮುಗಿಯಲಿವೆ. ಔಷಧಗಳ ದುರ್ಬಳಕೆ ಮತ್ತು ನಶೆಗಾಗಿ ಬಳಸುವುದನ್ನು ತಡೆಯಲು ಭಾರತ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ.
ಇನ್ಮುಂದೆ ಶೇ. 12ಕ್ಕಿಂತ ಹೆಚ್ಚು ಆಲ್ಕೋಹಾಲ್ ಅಂಶ ಹೊಂದಿರುವ ಎಲ್ಲಾ ಓರಲ್ (ಬಾಯಿಯ ಮೂಲಕ ಸೇವಿಸುವ) ಔಷಧಗಳನ್ನು ‘ಶೆಡ್ಯೂಲ್ ಹೆಚ್1’ ವರ್ಗಕ್ಕೆ ಸೇರಿಸಲಾಗಿದೆ. ಇದರರ್ಥ, ವೈದ್ಯರ ಲಿಖಿತ ಚೀಟಿ ಇಲ್ಲದೆ ಈ ಔಷಧಗಳನ್ನು ಇನ್ಮುಂದೆ ಯಾರಿಗೂ ಮಾರಾಟ ಮಾಡುವಂತಿಲ್ಲ.

*ಮೆಡಿಕಲ್ ಶಾಪ್‌ಗಳಿಗೂ ಕಠಿಣ ನಿಯಮ:*
ಸರ್ಕಾರದ ಈ ಹೊಸ ನಿಯಮದಿಂದಾಗಿ ಕಫ ಸಿರಪ್ ಹಾಗೂ ಆಲ್ಕೋಹಾಲ್ ಅಂಶವಿರುವ ಟಾನಿಕ್‌ಗಳ ಮುಕ್ತ ಮಾರಾಟಕ್ಕೆ ಬ್ರೇಕ್ ಬೀಳಲಿದೆ. ಕೇವಲ ಗ್ರಾಹಕರಿಗೆ ಮಾತ್ರವಲ್ಲದೆ, ಈ ಔಷಧಗಳನ್ನು ಮಾರಾಟ ಮಾಡುವ ಫಾರ್ಮಸಿ ಮಾಲೀಕರಿಗೂ ಕಠಿಣ ನಿಯಮಗಳನ್ನು ವಿಧಿಸಲಾಗಿದೆ. ಅವರು ಈ ಕೆಳಗಿನ ನಿಯಮಗಳನ್ನು ಪಾಲಿಸಬೇಕಾಗುತ್ತದೆ.

*ವೈದ್ಯರ ಅಧಿಕೃತ ಚೀಟಿ ಇದ್ದರೆ ಮಾತ್ರ ಔಷಧ ನೀಡಬೇಕು*
ಯಾವ ಗ್ರಾಹಕರಿಗೆ, ಎಷ್ಟು ಪ್ರಮಾಣದಲ್ಲಿ ಔಷಧ ಮಾರಾಟ ಮಾಡಲಾಗಿದೆ ಎಂಬ ಸಂಪೂರ್ಣ ದಾಖಲೆಯನ್ನು ಕಾಯ್ದಿರಿಸಬೇಕು.ವೈದ್ಯರ ಪ್ರಿಸ್ಕ್ರಿಪ್ಷನ್ ಪ್ರತಿಯನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು.

*ಯಾವ ಔಷಧಗಳಿಗೆ ಇದು ಅನ್ವಯ?:*
ಹೊಸ ಬದಲಾವಣೆಯ ಪ್ರಕಾರ, ಶೇ. 12ಕ್ಕಿಂತ ಹೆಚ್ಚು ಆಲ್ಕೋಹಾಲ್ ಹೊಂದಿರುವ ಹಾಗೂ 30 ಮಿಲಿಲೀಟರ್‌ಗಿಂತ ಹೆಚ್ಚಿನ ಪ್ರಮಾಣದ ಪ್ಯಾಕ್ ಅಥವಾ ಬಾಟಲಿಗಳಲ್ಲಿ ಬರುವ ಎಲ್ಲಾ ಓರಲ್ ಔಷಧಗಳು ಈ ನಿಯಮದ ವ್ಯಾಪ್ತಿಗೆ ಬರಲಿವೆ.

*ನಿಯಮ ಬದಲಾವಣೆಗೆ ಕಾರಣವೇನು?:*
ದೇಶದಲ್ಲಿ ಆಲ್ಕೋಹಾಲ್ ಮತ್ತು ಕೋಡಿನ್ (Codeine) ಅಂಶವಿರುವ ಕೆಮ್ಮಿನ ಸಿರಪ್‌ಗಳನ್ನು ನಶೆಗಾಗಿ (ಮಾದಕ ವಸ್ತುವಿನಂತೆ) ವ್ಯಾಪಕವಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ವಿವಿಧ ರಾಜ್ಯಗಳಲ್ಲಿ ಇಂತಹ ಸಿರಪ್‌ಗಳ ದೊಡ್ಡ ಮಟ್ಟದ ಕಳ್ಳಸಾಗಣೆಯ ಜಾಲವೂ ಪತ್ತೆಯಾಗಿತ್ತು. ಜೊತೆಗೆ, ಕಳೆದ ವರ್ಷ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಕಫ ಸಿರಪ್ ಸೇವನೆಯಿಂದಾಗಿ ಹಲವು ಮಕ್ಕಳು ಸಾವನ್ನಪ್ಪಿದ ಘಟನೆಯೂ ನಡೆದಿತ್ತು. ಈ ಗಂಭೀರ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ‘ಡ್ರಗ್ಸ್ ರೂಲ್ಸ್ 1945’ ಕ್ಕೆ ತಿದ್ದುಪಡಿ ತಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು