9:30 PM Friday31 - July 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ಭಾವಚಿತ್ರಗಳ ಇಟ್ಟು ಪೂಜೆ: ಅರ್ಚಕ ಅಮಾನತು

07/08/2024, 00:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಕುರಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ತೂಗುದೀಪ ಅವರ ಭಾವಚಿತ್ರಗಳನ್ನು ಇರಿಸಿ, ಪೂಜಿಸಿದ ಆರೋಪದ ಮೇಲೆ ಅರ್ಚಕ ಜೀರ್ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದೇವಸ್ಥಾನ ಮಂಡಳಿ ಆದೇಶ ಹೊರಡಿಸಿದೆ.
ಗರ್ಭಗುಡಿಯ ಮೂಲ ವಿಗ್ರಹದ ಮುಂಭಾಗದಲ್ಲಿ ನಟ ದರ್ಶನ್ ಅವರ ವಿವಿಧ ಭಂಗಿಯ ಆರು ಚಿತ್ರಗಳನ್ನು ಇರಿಸಿ ವಿಶೇಷ ಪೂಜೆ ನೆರವೇರಿಸಿದ ವಿಡಿಯೊ ಸೋಮವಾರ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಭಕ್ತರಿಂದ ಟೀಕೆ ವ್ಯಕ್ತವಾಗಿತ್ತು.
‘ದೇವಸ್ಥಾನದ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು