7:27 AM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ಭಾವಚಿತ್ರಗಳ ಇಟ್ಟು ಪೂಜೆ: ಅರ್ಚಕ ಅಮಾನತು

07/08/2024, 00:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಕುರಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ತೂಗುದೀಪ ಅವರ ಭಾವಚಿತ್ರಗಳನ್ನು ಇರಿಸಿ, ಪೂಜಿಸಿದ ಆರೋಪದ ಮೇಲೆ ಅರ್ಚಕ ಜೀರ್ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದೇವಸ್ಥಾನ ಮಂಡಳಿ ಆದೇಶ ಹೊರಡಿಸಿದೆ.
ಗರ್ಭಗುಡಿಯ ಮೂಲ ವಿಗ್ರಹದ ಮುಂಭಾಗದಲ್ಲಿ ನಟ ದರ್ಶನ್ ಅವರ ವಿವಿಧ ಭಂಗಿಯ ಆರು ಚಿತ್ರಗಳನ್ನು ಇರಿಸಿ ವಿಶೇಷ ಪೂಜೆ ನೆರವೇರಿಸಿದ ವಿಡಿಯೊ ಸೋಮವಾರ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಭಕ್ತರಿಂದ ಟೀಕೆ ವ್ಯಕ್ತವಾಗಿತ್ತು.
‘ದೇವಸ್ಥಾನದ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು