4:21 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ಭಾವಚಿತ್ರಗಳ ಇಟ್ಟು ಪೂಜೆ: ಅರ್ಚಕ ಅಮಾನತು

07/08/2024, 00:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಕುರಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ತೂಗುದೀಪ ಅವರ ಭಾವಚಿತ್ರಗಳನ್ನು ಇರಿಸಿ, ಪೂಜಿಸಿದ ಆರೋಪದ ಮೇಲೆ ಅರ್ಚಕ ಜೀರ್ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದೇವಸ್ಥಾನ ಮಂಡಳಿ ಆದೇಶ ಹೊರಡಿಸಿದೆ.
ಗರ್ಭಗುಡಿಯ ಮೂಲ ವಿಗ್ರಹದ ಮುಂಭಾಗದಲ್ಲಿ ನಟ ದರ್ಶನ್ ಅವರ ವಿವಿಧ ಭಂಗಿಯ ಆರು ಚಿತ್ರಗಳನ್ನು ಇರಿಸಿ ವಿಶೇಷ ಪೂಜೆ ನೆರವೇರಿಸಿದ ವಿಡಿಯೊ ಸೋಮವಾರ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಭಕ್ತರಿಂದ ಟೀಕೆ ವ್ಯಕ್ತವಾಗಿತ್ತು.
‘ದೇವಸ್ಥಾನದ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು