9:17 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ಭಾವಚಿತ್ರಗಳ ಇಟ್ಟು ಪೂಜೆ: ಅರ್ಚಕ ಅಮಾನತು

07/08/2024, 00:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಕುರಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ತೂಗುದೀಪ ಅವರ ಭಾವಚಿತ್ರಗಳನ್ನು ಇರಿಸಿ, ಪೂಜಿಸಿದ ಆರೋಪದ ಮೇಲೆ ಅರ್ಚಕ ಜೀರ್ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದೇವಸ್ಥಾನ ಮಂಡಳಿ ಆದೇಶ ಹೊರಡಿಸಿದೆ.
ಗರ್ಭಗುಡಿಯ ಮೂಲ ವಿಗ್ರಹದ ಮುಂಭಾಗದಲ್ಲಿ ನಟ ದರ್ಶನ್ ಅವರ ವಿವಿಧ ಭಂಗಿಯ ಆರು ಚಿತ್ರಗಳನ್ನು ಇರಿಸಿ ವಿಶೇಷ ಪೂಜೆ ನೆರವೇರಿಸಿದ ವಿಡಿಯೊ ಸೋಮವಾರ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಭಕ್ತರಿಂದ ಟೀಕೆ ವ್ಯಕ್ತವಾಗಿತ್ತು.
‘ದೇವಸ್ಥಾನದ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು