9:52 PM Thursday8 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ…

ಇತ್ತೀಚಿನ ಸುದ್ದಿ

Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ ಕಂಕಣ ಭಾಗ್ಯ

07/05/2025, 21:02

ದೊಡ್ಡಬಳ್ಳಾಪುರ(reporterkarnataka.com): ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು, ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳ ಸಾನಿದ್ಯದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ 66 ಜೋಡಿಗಳ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಈ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಈ ಶುಭ ಲಗ್ನ ದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಮದುವೆ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ.
ಅಧಿಕಾರಿಗಳು ಮತ್ತು ಪ್ರಾಧಿಕಾರದ ಸದಸ್ಯರು ಉತ್ತಮ ವಾಗಿ ಕಾರ್ಯಕ್ರಮ ಆಯೋಜಿಸಿದ್ದು ನಿಮಗೆ ವಿಶೇಷವಾದ ಧನ್ಯವಾದಗಳನ್ನು ತಿಳಿಸಬೇಕು.
ಮದುವೆಗೆ ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ಮಾಡುವ ಮದುವೆಗಳಿಗಿಂತ ದೇವರ ಸನ್ನಿದಾನದಲ್ಲಿ ಮಾಡಿರುವ ಈ ಮದುವೆ ಶ್ರೇಷ್ಠವಾಗಿದೆ. ತಮಗೆ ಉತ್ತಮ ಆರೋಗ್ಯ ಭಾಗ್ಯವನ್ನು ದೇವರು ಕರುಣಿಸಲಿ ಎಂದರು.


ನವ ದಂಪತಿಗಳಾದ ತಾವು ಪ್ರೀತಿ ವಾತ್ಸಲ್ಯದಿಂದ ಜೀವನ ಮಾಡಬೇಕು ಮತ್ತು ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಂಡು ಉತ್ತಮ ಜೀವನಸಾಗಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಬಸವರಾಜು, ಸಿಇಒ ಡಾ.ಅನುರಾಧ, ಮಾಜಿ ಶಾಸಕ ವೆಂಕಟರಮಣಯ್ಯ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ರಾಥೊಡ್, ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಮಹೇಶ್, ರವಿ, ಹೇಮಲತಾ ,ಲಕ್ಷ್ಮಾ ನಾಯಕ್ , ಬಯ್ಯಪ್ಪಾ ಸದಸ್ಯರಾದ ಮಂಜುನಾಥ್, ರವಿಸಿದ್ದಪ್ಪ, ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು