5:26 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

‘ಡೋಂಗಿ ಡೋಂಗಿ’ ; ಬಿಜೆಪಿ ನಾಯಕರ ವಿರುದ್ಧ ಕಾರ್ಯಕರ್ತರ ಆಕ್ರೋಶ

27/07/2022, 13:59

ಮಂಗಳೂರು(Reporterkarnataka.com): ಹಿಂದೂ ಕಾರ್ಯಕರ್ತರ ಆಕ್ರೋಶದ ಕಟ್ಟೆ ಓಡೆದು, ಪ್ರವೀಣ್ ನೆಟ್ಟಾರು ಅಂತಿಮ ದರ್ಶನದ ವೇಳೆ ‘ಬೇಕೇ ಬೇಕು ನ್ಯಾಯ ಬೇಕು’ ಎಂಬ ಒತ್ತಾಯ ಕೇಳಿಬಂದಿತು.

ಬೆಳ್ಳಾರೆ ಪೇಟೆಯಲ್ಲಿ ಪ್ರವೀಣ್ ಮೃತದೇಹ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹಾಗೂ ಸಚಿವ ಅಂಗಾರ ಅವರನ್ನು ಸುತ್ತುವರೆದ ಕಾರ್ಯಕರ್ತರು ‘ಡೋಂಗಿ ಡೋಂಗಿ’ ಎಂದು ಧಿಕ್ಕಾರ ಕೂಗಿದರು.

ಕಾರ್ಯಕರ್ತರ ಆಕ್ರೋಶಕ್ಕೆ ಕಂಗಾಲಾದ ಸಚಿವರು ಕುಳಿತಲ್ಲೇ ಕೈಕಟ್ಟಿ ಮೌನಕ್ಕೆ ಶರಣಾದರು. ಬಿಜೆಪಿ ಹಾಗೂ ಸಂಘಪರಿವಾರದ ಹಲವು ನಾಯಕರು ಕಾರ್ಯಕರ್ತರನ್ನು ಸಮಾಧಾನಿಸಿದರೂ ಹಲವು ಕಾರ್ಯಕರ್ತರು ಕಿರುಚಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಸಹಿತ, ಸಂಸದ ನಳಿನ್ ಕುಮಾರ್ ಆದಿಯಾಗಿ ಸಚಿವರು ಕಾರ್ಯಕರ್ತರನ್ನು ಸಮಾಧಾನಿಸಲು ಯತ್ನಿಸಿದರೂ ಕೇಳದ ಕಾರ್ಯಕರ್ತರು ಬಿಜೆಪಿಗೆ ಧಿಕ್ಕಾರ ಕೂಗಿದರು.
ಪೊಲೀಸರು ಸಹ ಯಾರನ್ನು ಸಮಾಧಾನಿಸಲು ಯತ್ನಿಸಿದರೂ ಯಾರು ಕೇಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು