6:34 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

14/12/2025, 18:38

ಹಾವೇರಿ(reporterkarnataka.com): ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು ಯೋಜಿಸಿದ್ದು, ಒಟ್ಟು ನೀರಿನ ಹರಿವಿಗೆ ಯಾವುದೇ ತೊಂದರೆಯಿಲ್ಲ, ದಯವಿಟ್ಟು ಯೋಜನೆಗೆ ಸಹಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಪರಮ ಪೂಜ್ಯ ಸ್ವರ್ಣವಲ್ಲಿ ಶ್ರೀಗಳ ನೇತೃತ್ವದಲ್ಲಿ ಬೆಡ್ತಿ – ವರದಾ ಕುರಿತು ಚರ್ಚೆ ಮಾಡಿದ್ದಾರೆ. ಬೆಡ್ತಿ ಯೋಜನೆಗೆ ಆಕ್ಷೇಪ ವ್ಯಕ್ರ ಪಡಿಸಿದ್ದಾರೆ. ನಾವು ಆ ಭಾಗದ ಜನರ ಗುರುಗಳ ಭಾವನೆ ಗೌರವಿಸುತ್ತೇವೆ. ತಪ್ಪು ಕಲ್ಪನೆ ಮೇಲೆ ವಿರೋಧ ಮಾಡುವುದು ಬೇಡ ಅನ್ನುವ ಮನವಿಯನ್ನು ಆದರ ಪೂರಕವಾಗಿ ಮಾಡುತ್ತೇನೆ. ಈ ಯೋಜನೆ ಸುಮಾರು 30 ವರ್ಷದಿಂದ ಇದೆ. ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಆಥಾರಿಟಿ ಯಿಂದ ಬಂದಿರುವ ಯೋಜನೆ. ದಕ್ಷಿಣ ಭಾರತದ ಪ್ರಮುಖ ಮೂರು ಯೋಜನೆಗಳಲ್ಲಿ ಇದು ಒಂದು. ಈಗಿರುವ ರಾಜಕಾರಣಿಗಳು ಆಗ ಯಾರೂ ರಾಜಕಾರಣದಲ್ಲಿ ಇರಲೇ ಇಲ್ಲ ಎಂದು ಹೇಳಿದರು.

*ಸದ್ಬಳಕೆಗೆ ಯೋಜನೆ:*
ಇದು ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ. ಈಗ ಯೋಜನೆ ಪರಿಷ್ಕರಿಣೆ ಆಗಿದೆ. ಸಣ್ಣ ಬ್ಯಾರೇಜ್ ಮಾಡಿ ಲಿಪ್ಟ್ ಮಾಡಲಾಗುತ್ತದೆ‌ ಯಾವುದೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗುವುದಿಲ್ಲ. ನದಿಯ ಕೇವಲ 10 % ರಷ್ಟು ನೀರು ಮಾತ್ರ ತೆಗೆದುಕೊಳ್ಳಬೇಕು ಅನ್ನುವ ಚಿಂತನೆ ಇದೆ. ಹೀಗಾಗಿ ನದಿ ಪಾತ್ರದ ನೀ ರಿನ ಹರಿವಿಗೆ ಯಾವುದೇ ತೊಂದರೆ ಇಲ್ಲ. ಈ ಯೋಜನೆಗೆ ಡಿ ಪಿ ಆರ್ ಆಗಬೇಕು ಪರಿಸರದ ಪರಿಣಾಮಗಳ ಅಧ್ಯಯನ ಆಗಬೇಕು. ಅದರ ಸಾಧಕ ಬಾಧಕ ನೋಡುತ್ತಾರೆ. ಇದೆಲ್ಲ ಪ್ರಕ್ರಿಯೆ ಇದೆ. ದಯವಿಟ್ಟು ಸಹಕಾರ ಮಾಡಬೇಕು. ಯೋಜನೆ ಸಂಪೂರ್ಣ ವಿವರ ಬಂದಾಗ ಪರಿಣಿತರು ತೀರ್ಮಾನ ಮಾಡುತ್ತಾರೆ. ನೀರಿನ ಸಂಪತ್ತು ಸದ್ಬಳಕೆ ಆಗಬೇಕು. ನೀರೇ ಇಲ್ಲದ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡ ಇದೆ. ನಾವು ಮಳೆಗಾಲದಲ್ಲಿ ನೀರು ಹಿಡಿದಿಟ್ಟು ಬೇಸಿಗೆಯಲ್ಲಿ ನೀರು ಉಪಯೋಗಿಸ್ತೇವೆ‌ ಬರ ಪ್ರದೇಶಕ್ಕೆ ಈ ನೀರು ಅನುಕೂಲ ಅಗುತ್ತದೆ. ಒಬ್ಬರಿಗೊಬ್ಬರು ಸಹಕಾರ ಕೊಡಬೇಕು. ಯೋಜನೆಯಿಂದ ಯಾವುದೇ ತೊಂದರೆ ಇಲ್ಲ. ಇದರಿಂದ ಬರ ಪೀಡಿತ ಹಾವೇರಿ ಮತ್ತು ಇತರ ಜಿಲ್ಲೆಗೆ ಅನುಕೂಲ ಆಗುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು