8:16 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

14/12/2025, 18:38

ಹಾವೇರಿ(reporterkarnataka.com): ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು ಯೋಜಿಸಿದ್ದು, ಒಟ್ಟು ನೀರಿನ ಹರಿವಿಗೆ ಯಾವುದೇ ತೊಂದರೆಯಿಲ್ಲ, ದಯವಿಟ್ಟು ಯೋಜನೆಗೆ ಸಹಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಪರಮ ಪೂಜ್ಯ ಸ್ವರ್ಣವಲ್ಲಿ ಶ್ರೀಗಳ ನೇತೃತ್ವದಲ್ಲಿ ಬೆಡ್ತಿ – ವರದಾ ಕುರಿತು ಚರ್ಚೆ ಮಾಡಿದ್ದಾರೆ. ಬೆಡ್ತಿ ಯೋಜನೆಗೆ ಆಕ್ಷೇಪ ವ್ಯಕ್ರ ಪಡಿಸಿದ್ದಾರೆ. ನಾವು ಆ ಭಾಗದ ಜನರ ಗುರುಗಳ ಭಾವನೆ ಗೌರವಿಸುತ್ತೇವೆ. ತಪ್ಪು ಕಲ್ಪನೆ ಮೇಲೆ ವಿರೋಧ ಮಾಡುವುದು ಬೇಡ ಅನ್ನುವ ಮನವಿಯನ್ನು ಆದರ ಪೂರಕವಾಗಿ ಮಾಡುತ್ತೇನೆ. ಈ ಯೋಜನೆ ಸುಮಾರು 30 ವರ್ಷದಿಂದ ಇದೆ. ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಆಥಾರಿಟಿ ಯಿಂದ ಬಂದಿರುವ ಯೋಜನೆ. ದಕ್ಷಿಣ ಭಾರತದ ಪ್ರಮುಖ ಮೂರು ಯೋಜನೆಗಳಲ್ಲಿ ಇದು ಒಂದು. ಈಗಿರುವ ರಾಜಕಾರಣಿಗಳು ಆಗ ಯಾರೂ ರಾಜಕಾರಣದಲ್ಲಿ ಇರಲೇ ಇಲ್ಲ ಎಂದು ಹೇಳಿದರು.

*ಸದ್ಬಳಕೆಗೆ ಯೋಜನೆ:*
ಇದು ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ. ಈಗ ಯೋಜನೆ ಪರಿಷ್ಕರಿಣೆ ಆಗಿದೆ. ಸಣ್ಣ ಬ್ಯಾರೇಜ್ ಮಾಡಿ ಲಿಪ್ಟ್ ಮಾಡಲಾಗುತ್ತದೆ‌ ಯಾವುದೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗುವುದಿಲ್ಲ. ನದಿಯ ಕೇವಲ 10 % ರಷ್ಟು ನೀರು ಮಾತ್ರ ತೆಗೆದುಕೊಳ್ಳಬೇಕು ಅನ್ನುವ ಚಿಂತನೆ ಇದೆ. ಹೀಗಾಗಿ ನದಿ ಪಾತ್ರದ ನೀ ರಿನ ಹರಿವಿಗೆ ಯಾವುದೇ ತೊಂದರೆ ಇಲ್ಲ. ಈ ಯೋಜನೆಗೆ ಡಿ ಪಿ ಆರ್ ಆಗಬೇಕು ಪರಿಸರದ ಪರಿಣಾಮಗಳ ಅಧ್ಯಯನ ಆಗಬೇಕು. ಅದರ ಸಾಧಕ ಬಾಧಕ ನೋಡುತ್ತಾರೆ. ಇದೆಲ್ಲ ಪ್ರಕ್ರಿಯೆ ಇದೆ. ದಯವಿಟ್ಟು ಸಹಕಾರ ಮಾಡಬೇಕು. ಯೋಜನೆ ಸಂಪೂರ್ಣ ವಿವರ ಬಂದಾಗ ಪರಿಣಿತರು ತೀರ್ಮಾನ ಮಾಡುತ್ತಾರೆ. ನೀರಿನ ಸಂಪತ್ತು ಸದ್ಬಳಕೆ ಆಗಬೇಕು. ನೀರೇ ಇಲ್ಲದ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡ ಇದೆ. ನಾವು ಮಳೆಗಾಲದಲ್ಲಿ ನೀರು ಹಿಡಿದಿಟ್ಟು ಬೇಸಿಗೆಯಲ್ಲಿ ನೀರು ಉಪಯೋಗಿಸ್ತೇವೆ‌ ಬರ ಪ್ರದೇಶಕ್ಕೆ ಈ ನೀರು ಅನುಕೂಲ ಅಗುತ್ತದೆ. ಒಬ್ಬರಿಗೊಬ್ಬರು ಸಹಕಾರ ಕೊಡಬೇಕು. ಯೋಜನೆಯಿಂದ ಯಾವುದೇ ತೊಂದರೆ ಇಲ್ಲ. ಇದರಿಂದ ಬರ ಪೀಡಿತ ಹಾವೇರಿ ಮತ್ತು ಇತರ ಜಿಲ್ಲೆಗೆ ಅನುಕೂಲ ಆಗುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು