12:53 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಡೂಮ್ ಡೇ ಆರಾಧನೆ: ಕೆನ್ಯಾದಲ್ಲಿ ಮತ್ತೆ 12 ಮಂದಿ ಶವ ಪತ್ತೆ; ಮೃತರ ಸಂಖ್ಯೆ 400ಕ್ಕೇರಿಕೆ

19/07/2023, 14:26

ನೈರೋಬಿ(reporterkarnataka.com):
ಕೆನ್ಯಾದಲ್ಲಿ ಡೂಮ್‌ ಡೇ ಆರಾಧನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ತೇದಾರರು ಸೋಮವಾರ 12 ಮೃತದೇಹಗಳನ್ನು ಹೊರತೆಗೆದಿದ್ದು, ಇದರಿಂದ ಮೃತಪಟ್ಟವರ ಸಂಖ್ಯೆ 400 ದಾಟಿದೆ.
ಯೇಸು ಸ್ವಾಮಿಯನ್ನು ಸಂಧಿಸಲು ಸಾಯುವ ತನಕ ಉಪವಾಸ ವ್ರತಾಚರಣೆ ಇದಾಗಿದೆ. ಕರಾವಳಿ ಕೆನ್ಯಾದ ಮಲಿಂದಿ ಪಟ್ಟಣ ಬಳಿಯ ಶಕಹೋಲ ಅರಣ್ಯದಲ್ಲಿ ನೆಲೆಸಿರುವ ಪಂಥದೊಂದಿಗೆ ನಂಟು ಹೊಂದಿದ್ದ ಧಾರ್ಮಿಕ ನಾಯಕ ಪೌಲ್ ಮ್ಯಾಂಕಝಿ, ತನ್ನ ಅನುಯಾಯಿಗಳಿಗೆ ಈ ಆರಾಧನೆ ನಡೆಸುವಂತೆ ಉಪದೇಶಿಸಿದ್ದರು.
ಕಠೋರ ವ್ರತಾಚರಣೆಯಿಂದ ಹಲವರು ಮೃತಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೌಲ್ ಮತ್ತು 36 ಶಂಕಿತರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಇನ್ನಷ್ಟೇ ಇವರೆಲ್ಲರ ವಿರುದ್ಧ ದೋಷಾರೋಪ ಹೊರಿಸಬೇಕಿದೆ.
‘ಮೃತಪಟ್ಟವರ ಸಂಖ್ಯೆ 403ಕ್ಕೇರಿದ್ದು, 95 ಜನರನ್ನು ರಕ್ಷಿಸಲಾಗಿದೆ’ ಎಂದು ಕರಾವಳಿ ಪ್ರಾದೇಶಿಕ ಆಯುಕ್ತ ರೋಡಾ ಒನ್ಯಾಂಚ ಹೇಳಿದ್ದಾರೆ.
ಮಲಿಂದಿ ಪಟ್ಟಣದಲ್ಲಿ ಬೀಡುಬಿಟ್ಟಿರುವ ಕೆನ್ಯಾ ರೆಡ್‌ ಕ್ರಾಸ್‌ ಅಧಿಕಾರಿಗಳಿಗೆ 613 ಜನರು ನಾಪತ್ತೆಯಾಗಿರುವ ವರದಿ ದಾಖಲಾಗಿದೆ. ಪತ್ತೆದಾರರು ಸಾಮೂಹಿಕ ಸಮಾಧಿಗಳನ್ನು ಈಗಲೂ ಹುಡುಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು