1:21 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ದೂಪದಹಳ್ಳಿ ರೂಪಾಬಾಯಿಗೆ ಪಿಎಸ್ ಐ ಆಗಿ ಬಡ್ತಿ: ಸಂಭ್ರಮಿಸಿ ಅಭಿನಂದಿಸಿದ ತಾಂಡದ ಜನತೆ

23/01/2022, 17:47

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಬಡ ವಿದ್ಯಾರ್ಥಿನಿ, ಈ ವರೆಗೆ ರೂಪ ಬಾಯಿ ಪೇದೆಯಾಗಿದ್ದವರು ಈಗ ಪಿಎಸ್ಐ ಹುದ್ದೆ ಅಲಂಕರಿಸಿದ್ದಾರೆ. ಅವರಿಗೆ ತಾಂಡಾದ ಗ್ರಾಮಸ್ಥರು ಹಾಗೂ ಹಿರಿಯರು, ಮಹಿಳೆಯರು, ವಿವಿದ ಸಂಘಟನೆಗಳ ಪದಾಧಿಕಾರಿಗಳು ಸನ್ಮಾನಿಸಿ ಅಭಿನಂದಿಸಿದ್ದಾರೆ. 

ದೂಪದಹಳ್ಳಿ ತಾಂಡದ ಕೊಟ್ರೇಶ್ ನಾಯ್ಕ್ ಅವರ  ಪುತ್ರಿಯಾದ ರೂಪ ಬಾಯಿ ರವರು, Bsc Agri ಮುಗಿಸಿ ಪಿಸಿ ಹುದ್ದೆಗೆ ಆಯ್ಕೆಯಾಗಿ ಒಂದೇ ವರ್ಷದಲ್ಲಿ ಪಿಎಸ್ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಇವರ ತಂದೆ ವಿದ್ಯಾಭ್ಯಾಸಕ್ಕೆ ಏನು ಕೊರತೆಯನ್ನು ಮಾಡದೆ ಮಗಳನ್ನು ಚೆನ್ನಾಗಿ ಓದಿಸಿ ಉನ್ನತ  ಸ್ಥಾನಕ್ಕೆ ತಂದಿದ್ದಾರೆ. ಕೊಟ್ರೇಶ್ ನಾಯಕ್ ಅವರಿಗೆ ಮೂರು ಜನ ಹೆಣ್ಣು ಮಕ್ಕಳು ಇಬ್ಬರು ಗಂಡು ಮಕ್ಕಳು. ರೂಪ ಬಾಯಿ ಅವರು ಎರಡನೆಯ ಮಗಳು. ಅಣ್ಣ ಹಾಗೂ ತಮ್ಮ ಕಬ್ಬು ಕಟಾವು ಮಾಡುತ್ತಿದ್ದಾರೆ. ರೂಪ ಬಾಯಿ ಅವರು ಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವುದನ್ನು ಆಯ್ಕೆಯಾಗಿರುವುದನ್ನು ಕಂಡು ಊರಿನ ಹಿರಿಯರು ಮುಖಂಡರು ಖುಷಿಯನ್ನು ವ್ಯಕ್ತಪಡಿಸಿದರು ಹಾಗೂ ಅವರ ಸಾಧನೆಗೆ ತಾಂಡದ ನಾಯಕರವರು ಶಾಲು ಮತ್ತು ಹಾರ ಹಾಕಿ,ಹಣ್ಣುಹಂಪಲು ಕೊಟ್ಟು ಅವರಿಗೆ ಸನ್ಮಾನಿಸಿದರು.

ದೂಪದಹಳ್ಳಿ ತಾಂಡದ ಗೋರ ಸೇನಾ ಸಂಘಟನೆದಿಂದ ಹಾಗೂ  ಗೋರ್ ಸಿಕ್ವಾಡಿ ಬಾಲಸಂಸ್ಕಾರ  ಕೇಂದ್ರದಲ್ಲಿ  ಅವರಿಗೆ ಸನ್ಮಾನಿಸಿದರು. ಗೋರ್ ಸೇನಾ ಅಧ್ಯಕ್ಷರಾದ ರಮೇಶ್ ನಾಯ್ಕ ಹಾಗೂ  ಶಿವಪ್ರಕಾಶ್ ಮಹಾರಾಜರು ಅಭಿನಂದಿಸಿದರು.

ಬಾಲ ಸಂಸ್ಕಾರ ಕೇಂದ್ರದ ಶಿಕ್ಷಕರಾದ ಅನಿಲ್ ನಾಯ್ಕ್ ಮಾಂತೇಶ್ ನಾಯ್ಕ್ ,ಗೋರ್ ಸೇನಾ ಪದಾಧಿಕಾರಿಗಳು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು