1:49 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಬಿರುಸಿನ ಚುನಾವಣಾ ಪ್ರಚಾರ

24/04/2023, 17:40

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡಿನ ವ್ಯಾಪ್ತಿಯ ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ನಡೆಯಿತು.
ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಜೆ. ಆರ್. ಲೋಬೊ ಅವರು ಹಾಜರಿದ್ದು ತಮ್ಮ ಭಾಷಣದಲ್ಲಿ ತಾನು ಶಾಸಕನಾಗಿದ್ದಾಗ ಈ ಪ್ರದೇಶದ ಸುಮಾರು 2,000 ಜನರಿಗೆ ಹಕ್ಕು ಪತ್ರಗಳನ್ನು ನೀಡಿದ್ದೇನೆ. ಈ ಹಿಂದೆ ಬೆಂಗ್ರೆ ಪ್ರದೇಶಕ್ಕೆ ಕಂದಾಯ ಗ್ರಾಮ ಇರಲಿಲ್ಲ. ಅದನ್ನು ಕೂಡ ನಾನೇ ಮಾಡಿಸಿದ್ದೆ. ಅದಲ್ಲದೆ ಸ್ಮಾರ್ಟ್ ಸಿಟಿ ಯೋಜನೆ ಮಂಜೂರಾಗಿದ್ದು ಹಳೆ ಬಂದರು ಮತ್ತು ಮೀನುಗಾರಿಕೆಯಿಂದ. ಮೊದಲ ಹಂತದಲ್ಲಿ ಈ ಯೋಜನೆ ಮಂಜೂರು ಆಗಿರಲಿಲ್ಲ. ಬಿಜೆಪಿ ಸಂಸದರು ಇದ್ದೂ ಏನೂ ಪ್ರಯೋಜನ ಆಗಿರಲಿಲ್ಲ. ಆದುದರಿಂದ ನಾನು ಹಳೆ ಬಂದರು ಮತ್ತು ಮೀನುಗಾರಿಕೆ ಇವೆರಡರ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಅಧಿಕಾರಿಗಳಿಗೆ ಅಧ್ಯಯನ ಮಾಡಲು ಹೇಳಿ, ಬಳಿಕ ಎರಡನೇ ಹಂತದಲ್ಲಿ ಮಂಜೂರು ಮಾಡಿಸಿದೆ. ಆದರೂ ಈಗಿನ ಬಿಜೆಪಿ ಶಾಸಕರು ಮೀನುಗಾರಿಕೆ, ಹಳೆ ಬಂದರು ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ.ಅವಕಾಶ ಕೊಟ್ಟರೆ ಖಂಡಿತವಾಗಿಯೂ ಈ ಮೀನುಗಾರಿಕೆ, ಹಳೆ ಬಂದರು ಪ್ರದೇಶವನ್ನು ವಿಶೇಷವಾಗಿ ಒತ್ತು ನೀಡಿ ಅಭಿವೃದ್ಧಿಗೊಳಿಸಲು ಪಣ ತೋಡುವುದಾಗಿ ಹೇಳಿದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಎಂಎಲ್ ಸಿ ಐವನ್ ಡಿಸೋಜ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಹಿರಿಯ ಕಾಂಗ್ರೆಸ್ ನಾಯಕರಾದ ಶೇಖರ್ ಸುವರ್ಣ, ಪ್ರದೇಶ ಕಾಂಗ್ರೆಸ್ ಒಬಿಸಿ ಉಪಾಧ್ಯಕ್ಷ ಚೇತನ್ ಬೆಂಗ್ರೆ,ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಘಟಕದ ಅಧ್ಯಕ್ಷ ಹರೀಶ್ ಅಮೀನ್ ಬೆಂಗ್ರೆ,ವಾರ್ಡ್ ಅಧ್ಯಕ್ಷ ಅಬೂಬಕ್ಕರ್ ಅಶ್ರಫ್, ಮಾಜಿ ಅಧ್ಯಕ್ಷ ಆಸೀಫ್ ಬೆಂಗ್ರೆ, ಮಾಜಿ ಕಾರ್ಪೊರೇಟರ್ ಶಕುಂತಲಾ ಬೆಂಗ್ರೆ, ಸದಾಶಿವ ಅಮೀನ್,ಸತೀಶ್ ಕೋಟ್ಯಾನ್, ನವೀನ್ ಕರ್ಕೇರ, ತುಕಾರಾಂ ಕಾರ್ವಿ, ಭೋಜ ಕಾರ್ವಿ, ಸಮದ್, ಪ್ರವೀಣ್, ಅನಿಲ್ ಡಿಸೋಜ, ಮಿಥುನ್, ಪ್ರಸಾದ, ಮೋಹನ್, ಭಾಸ್ಕರ್ ರಾವ್, ಕಾರ್ಪೊರೇಟರ್ ಆಶ್ರಫ್ ಬಜಾಲ್, ರಫೀಕ್ ಕಣ್ಣೂರು, ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು