4:10 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಬಿರುಸಿನ ಚುನಾವಣಾ ಪ್ರಚಾರ

24/04/2023, 17:40

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡಿನ ವ್ಯಾಪ್ತಿಯ ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ನಡೆಯಿತು.
ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಜೆ. ಆರ್. ಲೋಬೊ ಅವರು ಹಾಜರಿದ್ದು ತಮ್ಮ ಭಾಷಣದಲ್ಲಿ ತಾನು ಶಾಸಕನಾಗಿದ್ದಾಗ ಈ ಪ್ರದೇಶದ ಸುಮಾರು 2,000 ಜನರಿಗೆ ಹಕ್ಕು ಪತ್ರಗಳನ್ನು ನೀಡಿದ್ದೇನೆ. ಈ ಹಿಂದೆ ಬೆಂಗ್ರೆ ಪ್ರದೇಶಕ್ಕೆ ಕಂದಾಯ ಗ್ರಾಮ ಇರಲಿಲ್ಲ. ಅದನ್ನು ಕೂಡ ನಾನೇ ಮಾಡಿಸಿದ್ದೆ. ಅದಲ್ಲದೆ ಸ್ಮಾರ್ಟ್ ಸಿಟಿ ಯೋಜನೆ ಮಂಜೂರಾಗಿದ್ದು ಹಳೆ ಬಂದರು ಮತ್ತು ಮೀನುಗಾರಿಕೆಯಿಂದ. ಮೊದಲ ಹಂತದಲ್ಲಿ ಈ ಯೋಜನೆ ಮಂಜೂರು ಆಗಿರಲಿಲ್ಲ. ಬಿಜೆಪಿ ಸಂಸದರು ಇದ್ದೂ ಏನೂ ಪ್ರಯೋಜನ ಆಗಿರಲಿಲ್ಲ. ಆದುದರಿಂದ ನಾನು ಹಳೆ ಬಂದರು ಮತ್ತು ಮೀನುಗಾರಿಕೆ ಇವೆರಡರ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಅಧಿಕಾರಿಗಳಿಗೆ ಅಧ್ಯಯನ ಮಾಡಲು ಹೇಳಿ, ಬಳಿಕ ಎರಡನೇ ಹಂತದಲ್ಲಿ ಮಂಜೂರು ಮಾಡಿಸಿದೆ. ಆದರೂ ಈಗಿನ ಬಿಜೆಪಿ ಶಾಸಕರು ಮೀನುಗಾರಿಕೆ, ಹಳೆ ಬಂದರು ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ.ಅವಕಾಶ ಕೊಟ್ಟರೆ ಖಂಡಿತವಾಗಿಯೂ ಈ ಮೀನುಗಾರಿಕೆ, ಹಳೆ ಬಂದರು ಪ್ರದೇಶವನ್ನು ವಿಶೇಷವಾಗಿ ಒತ್ತು ನೀಡಿ ಅಭಿವೃದ್ಧಿಗೊಳಿಸಲು ಪಣ ತೋಡುವುದಾಗಿ ಹೇಳಿದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಎಂಎಲ್ ಸಿ ಐವನ್ ಡಿಸೋಜ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಹಿರಿಯ ಕಾಂಗ್ರೆಸ್ ನಾಯಕರಾದ ಶೇಖರ್ ಸುವರ್ಣ, ಪ್ರದೇಶ ಕಾಂಗ್ರೆಸ್ ಒಬಿಸಿ ಉಪಾಧ್ಯಕ್ಷ ಚೇತನ್ ಬೆಂಗ್ರೆ,ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಘಟಕದ ಅಧ್ಯಕ್ಷ ಹರೀಶ್ ಅಮೀನ್ ಬೆಂಗ್ರೆ,ವಾರ್ಡ್ ಅಧ್ಯಕ್ಷ ಅಬೂಬಕ್ಕರ್ ಅಶ್ರಫ್, ಮಾಜಿ ಅಧ್ಯಕ್ಷ ಆಸೀಫ್ ಬೆಂಗ್ರೆ, ಮಾಜಿ ಕಾರ್ಪೊರೇಟರ್ ಶಕುಂತಲಾ ಬೆಂಗ್ರೆ, ಸದಾಶಿವ ಅಮೀನ್,ಸತೀಶ್ ಕೋಟ್ಯಾನ್, ನವೀನ್ ಕರ್ಕೇರ, ತುಕಾರಾಂ ಕಾರ್ವಿ, ಭೋಜ ಕಾರ್ವಿ, ಸಮದ್, ಪ್ರವೀಣ್, ಅನಿಲ್ ಡಿಸೋಜ, ಮಿಥುನ್, ಪ್ರಸಾದ, ಮೋಹನ್, ಭಾಸ್ಕರ್ ರಾವ್, ಕಾರ್ಪೊರೇಟರ್ ಆಶ್ರಫ್ ಬಜಾಲ್, ರಫೀಕ್ ಕಣ್ಣೂರು, ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು