9:39 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Double Murder | ಬೆಂಗಳೂರು; ಇಬ್ಬರ ಕೊಲೆಗೈದ ಆರೋಪಿಗೆ 10 ವರ್ಷ ಶಿಕ್ಷೆ; 10 ಸಾವಿರ ದಂಡ

01/03/2025, 23:04

ಬೆಂಗಳೂರು (reporterkarnataka.com:
2020ರ ಅಕ್ಟೋಬರ್ 18 ರಂದು ಬೆಳಗಿನ 8 ಗಂಟೆಯ ಸುಮಾರಿನಲ್ಲಿ, ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನ ಬಾಳೆ ಮಂಡಿಯೊಂದರಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿ ಎಂ.ಗಣೇಶ್ ಮನೋಹರ್(40)ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ 67ನೇ ಸಿಸಿಹೆಚ್ ನ್ಯಾಯಾಲಯದ ಅಪರ ಜಿಲ್ಲಾ ನ್ಯಾಯಾಧೀಶರಾದ ಎ‌. ಜಯಪ್ರಕಾಶ್ ತೀರ್ಪು ನೀಡಿದ್ದಾರೆ.
2020ರ ಅಕ್ಟೋಬರ್ 18 ರಂದು ಯಾವುದೇ ಉದ್ದೇಶವಿಲ್ಲದೇ, ಏಕಾಏಕಿ ಉದ್ವೇಗಕ್ಕೆ ಒಳಗಾದ ಎಂ.ಗಣೇಶ್ ಮನೋಹರ್ ಎಂಬ ಆರೋಪಿಯು, ಕಾಟನ್‌ಪೇಟೆಯ ಬಾಳೆ ಮಂಡಿಯೊಂದರಲ್ಲಿ ಅಂಜನಪ್ಪ ಗಾರ್ಡನ್ ನಿವಾಸಿ ಮಾರಿ ಬಿನ್ ರಾಮಮೂರ್ತಿ(34) ಹಾಗೂ ಮೈಸೂರು ರಸ್ತೆ ಫ್ಲವರ್ ಗಾರ್ಡನ್ ನಿವಾಸಿ ರಾಜೇಶ್ ಬಿನ್ ರಾಮು ಎಂಬುವರಿಗೆ ಚಾಕುವಿನಿಂದ ಇರಿದಿದ್ದರು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದರು . ಇದೇ ಘಟನೆಯಲ್ಲಿ 4-5 ಜನರು ಗಾಯಗೊಂಡಿದ್ದರು. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎಸ್.ಪಾಟೀಲ್ ಅವರು ವಾದ ಮಂಡಿಸಿ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಶಿಕ್ಷೆ ವಿಧಿಸಿದೆ.
ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು