4:55 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Double Murder | ಬೆಂಗಳೂರು; ಇಬ್ಬರ ಕೊಲೆಗೈದ ಆರೋಪಿಗೆ 10 ವರ್ಷ ಶಿಕ್ಷೆ; 10 ಸಾವಿರ ದಂಡ

01/03/2025, 23:04

ಬೆಂಗಳೂರು (reporterkarnataka.com:
2020ರ ಅಕ್ಟೋಬರ್ 18 ರಂದು ಬೆಳಗಿನ 8 ಗಂಟೆಯ ಸುಮಾರಿನಲ್ಲಿ, ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನ ಬಾಳೆ ಮಂಡಿಯೊಂದರಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದ ಆರೋಪಿ ಎಂ.ಗಣೇಶ್ ಮನೋಹರ್(40)ಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ 67ನೇ ಸಿಸಿಹೆಚ್ ನ್ಯಾಯಾಲಯದ ಅಪರ ಜಿಲ್ಲಾ ನ್ಯಾಯಾಧೀಶರಾದ ಎ‌. ಜಯಪ್ರಕಾಶ್ ತೀರ್ಪು ನೀಡಿದ್ದಾರೆ.
2020ರ ಅಕ್ಟೋಬರ್ 18 ರಂದು ಯಾವುದೇ ಉದ್ದೇಶವಿಲ್ಲದೇ, ಏಕಾಏಕಿ ಉದ್ವೇಗಕ್ಕೆ ಒಳಗಾದ ಎಂ.ಗಣೇಶ್ ಮನೋಹರ್ ಎಂಬ ಆರೋಪಿಯು, ಕಾಟನ್‌ಪೇಟೆಯ ಬಾಳೆ ಮಂಡಿಯೊಂದರಲ್ಲಿ ಅಂಜನಪ್ಪ ಗಾರ್ಡನ್ ನಿವಾಸಿ ಮಾರಿ ಬಿನ್ ರಾಮಮೂರ್ತಿ(34) ಹಾಗೂ ಮೈಸೂರು ರಸ್ತೆ ಫ್ಲವರ್ ಗಾರ್ಡನ್ ನಿವಾಸಿ ರಾಜೇಶ್ ಬಿನ್ ರಾಮು ಎಂಬುವರಿಗೆ ಚಾಕುವಿನಿಂದ ಇರಿದಿದ್ದರು ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದರು . ಇದೇ ಘಟನೆಯಲ್ಲಿ 4-5 ಜನರು ಗಾಯಗೊಂಡಿದ್ದರು. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಬಿ.ಎಸ್.ಪಾಟೀಲ್ ಅವರು ವಾದ ಮಂಡಿಸಿ ದಾಖಲೆಗಳು ಹಾಗೂ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 10 ವರ್ಷಗಳ ಶಿಕ್ಷೆ ವಿಧಿಸಿದೆ.
ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಲು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು