9:11 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಚಿಂತನೆ ಯುವ ಪೀಳಿಗೆಯಲ್ಲಿ ಬಿತ್ತುವ ಕಾರ್ಯ ನಡೆಯಲಿ: ಶಾಸಕ ವೇದವ್ಯಾಸ ಕಾಮತ್

30/11/2022, 19:28

ಮಂಗಳೂರು(reporterkarnataka.com): ಅಂಬೇಡ್ಕರ್ ಚಿಂತನೆಗಳನ್ನು ಯುವ ಪೀಳಿಗೆ ಅಭ್ಯಸಿಸಿ ಅಳವಡಿಸಿಕೊಂಡಾಗ ದೇಶಕ್ಕೆ ಮುಂದಿನ ಭವಿಷ್ಯವಾಗಿ ವ್ಯಕ್ತಿತ್ವ ರೂಪುಗೊಳ್ಳಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಉತ್ತರ ವಾರ್ಡಿನ ನಂತೂರು ಶ್ರೀ ಕೊರಗಜ್ಜ ಗುಡಿಯ ಬಳಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶದ ಏಕತೆಯ ಕುರಿತು, ಸಾಮಾಜಿಕ ಸಮಾನತೆಯ ಕುರಿತು ದೂರ ದೃಷ್ಟಿಯ ಚಿಂತನೆಯಿಂದ ನಿರ್ಮಿಸಿದ ಸಂವಿಧಾನವು ಈ ದೇಶದ ಭದ್ರ ಬುನಾದಿ. ಅವರ ಚಿಂತನೆಗಳನ್ನು ಸಮಾಜದ ಯುವ ಪೀಳಿಗೆಗಳಲ್ಲಿ ಬಿತ್ತುವ ಮೂಲಕ ಅವರಲ್ಲಿ ರಾಷ್ರ್ಟಾಭಿಮಾನ ಬೆಳೆಸುವ ಕಾರ್ಯ ಆಗಬೇಕು ಎಂದು ಹೇಳಿದರು.

ನಂತೂರು ಪರಿಸರದಲ್ಲಿ ಅಂಬೇಡ್ಕರ್ ಭವನ ನಿರ್ಮಿಸುವ‌ ಕುರಿತು‌ ಸ್ಥಳೀಯರು ಸ್ಥಳೀಯ ಕಾರ್ಪೋರೇಟರ್ ಮೂಲಕ ಸಲ್ಲಿಸಿದ ಬೇಡಿಕೆಯಂತೆ 20 ಲಕ್ಷ ರೂಪಾಯಿ ಅನುದಾನ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಶಕಿಲಾ ಕಾವಾ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಮೇಶ್ ಕಂಡೆಟ್ಟು, ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್ ಕುಲಶೇಖರ, ಮಂಗಳಾ ಆಚಾರ್ಯ, ಪೂರ್ಣಿಮಾ ರಾವ್, ಗಿರಿಧರ್ ಶೆಟ್ಟಿ, ಸಂತೋಷ್ ನಂತೂರು, ಪ್ರಸನ್ನ, ಕಮಲಾಕ್ಷಿ, ಗಾಯತ್ರಿ, ಶಿಲ್ಪ, ಉಮಾ ಕಂಡೆಟ್ಟು, ಉಮಾ ಶೆಟ್ಟಿ, ನಾರಾಯಣ ಶೆಟ್ಟಿ, ರಾಮಕೃಷ್ಣ ಕದ್ರಿ, ವೆಂಕಟೇಶ್ ಕದ್ರಿ, ನಿರ್ಮಲ ಗುಂಡಳಿಕೆ, ಸುಜಾತ ಗುಂಡಳಿಕೆ, ರವೀಂದ್ರ ನಂತೂರು, ವಿಜಯ ಶೆಣೈ, ಪುಷ್ಪ, ಹರಿ ನಂತೂರು, ಗಂಗಾಧರ್ ನಂತೂರು, ಕಮಲಾಕ್ಷಿ, ವಿಕ್ಟರ್ ಗುಂಡಳಿಕೆ, ಬೇಬಿ, ವಿದ್ಯಾ, ದೀಕ್ಷಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು