1:55 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್‌ಗೆ ಅವಮಾನ: ಸೇವೆಯಿಂದ ವಜಾ ಮಾಡಲು ದಲಿತ ಸಂಘಟನೆಗಳ ಮಹಾ  ಒಕ್ಕೂಟ ಒತ್ತಾಯ

27/01/2022, 14:52

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಧ್ವಜಾರೋಹಣಾ ನೆರವೇರಿಸಿದ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟ ಒತ್ತಾಯ ಮಾಡಿದೆ.

ನಗರದ ತಾಲೂಕು ಕಚೇರಿ ಮುಂಭಾಗದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಬಳಿ ಜಮಾಯಿಸಿದ ಪ್ರತಿಭಟಿಸಿದ ದಲಿತ ಸಂಘಟನೆಗಳ ಮುಖಂಡರು ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ತೆಗೆಸಿ ಧ್ವಜಾರೋಹಣ ನೇರವೇರಿಸಿರುವುದು ಡಾ. ಅಂಬೇಡ್ಕರ್ ಅವರನ್ನು ಅವಮಾನ ಮಾಡಿದಂತೆ. ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
 ಸರ್ಕಾರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರವಿಟ್ಟು ಗಣರಾಜ್ಯೋತ್ಸ ಮಾಡಬೇಕು ಎಂದು ಆದೇಶ ಹೊರಡಿಸಿದೆ. ಆದರೆ ರಾಯಚೂರು ನ್ಯಾಯಾಧೀಶರು ಅಂಬೇಡ್ಕರ್ ಭಾವಚಿತ್ರ ತೆಗೆಸಿ ಧ್ವಜಾರೋಹಣ ಮಾಡಿದ್ದಾರೆ. ಇದು ದೇಶದ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಕೂಡಲೇ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ನ್ಯಾಯಾಧೀಶರನ್ನು ಸರ್ಕಾರ ಸೇವೆಯಿಂದ ವಜಾಗೊಳಿಸಲು ಹಿಂದೇಟು ಹಾಕಿದರೆ, ಗ್ರಾಮೀಣ ಮಟ್ಟದಿಂದ ಸಂಘಟನೆ ಮಾಡಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ದಲಿತ ಸಂಘಟನೆಗಳ ಮಹಾ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಉಮೇಶ್ ಚಂದ್ರ ಬ್ಯಾನರ್ಜಿ, ದಲಿತ ಮುಖಂಡರಾದ ಕಾಂತರಾಜು, ಟಿ. ರಾಮಾಂಜನೇಯ, ವೀರೇಶ್, ಎಂ. ಮಾರಣ್ಣ, ಮಹೇಂದ್ರ, ಈರಣ್ಣ ಸೇರಿದಂತೆ ಮುಂತದಾವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು