7:53 AM Wednesday9 - April 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ…

ಇತ್ತೀಚಿನ ಸುದ್ದಿ

ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ

21/05/2021, 15:51

ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. 

ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು, ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.* 

ಈ ಅವಧಿಯಲ್ಲಿ ಆಡಳಿತ ಪಕ್ಷದ ನಾಯಕರುಗಳು ಹಲವಾರು ಸಭೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸದೆ ಇದ್ದುದರ ಬಗ್ಗೆ ಪೋಲೀಸ್ ಇಲಾಖೆ ಯಾವುದೆ ಕೇಸ್ ಹಾಕದೆ ಇದ್ದು ಸರ್ಕಾರದ ವಿರುದ್ಧ ಡಾ.ಕಕ್ಕಿಲ್ಲಾಯರು ತಪ್ಪು ನೀತಿಗಳ ವಿರುದ್ದ ನಡೆಸುತ್ತಿದ್ದ ಧ್ವನಿಯನ್ನು ಅಡಗಿಸುವ ಸರ್ಕಾರದ ಛಾಳಿಯ ಭಾಗವಾಗಿ ಈ ಕೇಸ್ ಹಾಕಲಾಗಿದೆ. ಸಿಪಿಐಎಂ, ಡಾ.ಬಿ ಶ್ರೀ ನಿವಾಸ ಕಕ್ಕಿಲ್ಲಾಯರೊಂದಿಗೆ ನಿಲ್ಲುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು